ನವದೆಹಲಿ: ದೇಶದ ರಕ್ಷಣಾ ರಫ್ತು 2029 ರ ವೇಳೆಗೆ ಪ್ರಸ್ತುತ 24 ಸಾವಿರ ಕೋಟಿ ರೂಪಾಯಿಗಳಿಂದ 50 ಸಾವಿರ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
11 ವರ್ಷಗಳ ಹಿಂದೆ ರಕ್ಷಣಾ ರಫ್ತು ಕೇವಲ 600 ಕೋಟಿ ರೂಪಾಯಿಗಳಷ್ಟಿತ್ತು ಮತ್ತು ಭಾರತ ವಿಶ್ವದ ಕಾರ್ಖಾನೆಯಾಗುವ ದಿನ ದೂರವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಕಲ್ಲಿದ್ದಲು ಗಣಿ ಸಚಿವ ಜಿ ಕಿಶನ್ ರೆಡ್ಡಿ ಅವರ ಸಮ್ಮುಖದಲ್ಲಿ ಹೈದರಾಬಾದ್ನಲ್ಲಿ ನಡೆದ ಮೂರು ದಿನಗಳ ಜೈನ್ ಅಂತರರಾಷ್ಟ್ರೀಯ ವ್ಯಾಪಾರ ಸಂಸ್ಥೆ -ಜಿಟೊ ಕನೆಕ್ಟ್ ಪ್ರದರ್ಶನವನ್ನು ರಕ್ಷಣಾ ಸಚಿವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಕ್ಷಣಾ ವಲಯ ಸೇರಿದಂತೆ ಎಲ್ಲಾ ಕ್ಷೇತ್ರಗಳು ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ ಆತ್ಮ ನಿರ್ಭರ ಭಾರತ್ ಆಗುವ ದಿಕ್ಕಿನಲ್ಲಿ ಸಾಗುತ್ತಿವೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮವು ರಕ್ಷಣಾ ವ್ಯವಸ್ಥೆಗಳಲ್ಲಿ ಸ್ಥಳೀಯ ಭಾಗಗಳನ್ನು ಬಳಸಲು ಸಾಧ್ಯವಾಗಿಸಿದೆ ಮತ್ತು ತೇಜಸ್ ಲಘು ಯುದ್ಧ ವಿಮಾನದಲ್ಲಿನ ಶೇಕಡಾ 64 ರಷ್ಟು ಭಾಗಗಳನ್ನು ಭಾರತದಲ್ಲಿಯೇ ತಯಾರಿಸಲಾಗುತ್ತದೆ ಎಂದು ಅವರು ಹೇಳಿದರು.
2030 ರ ವೇಳೆಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದ ಅವರು, ಮೇಕ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿ ಆಟಿಕೆಗಳಿಂದ ಹಿಡಿದು ಟ್ಯಾಂಕ್ಗಳವರೆಗೆ ಎಲ್ಲವನ್ನೂ ಭಾರತ ತಯಾರಿಸುತ್ತಿದೆ. ತನ್ನ ಏಕತೆಯನ್ನು ಕಾಪಾಡಲು ಸರ್ಕಾರವು ತನ್ನ ನಾಗರಿಕರನ್ನು ರಕ್ಷಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ದೃಢಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.