
ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರು 3,000 ಕೋಟಿ ರೂ.ಗಳಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ದೇವಾಲಯ ಯೋಜನೆಯ ಒಟ್ಟು ವೆಚ್ಚ ಸುಮಾರು 1,800 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದಿದ್ದಾರೆ.
“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭಕ್ತರು 3,000 ಕೋಟಿ ರೂ.ಗಳಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ದೇವಾಲಯ ಯೋಜನೆಯ ಒಟ್ಟು ವೆಚ್ಚ ಸುಮಾರು 1,800 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಮತ್ತು ಇಲ್ಲಿಯವರೆಗೆ ಸುಮಾರು 1,500 ಕೋಟಿ ರೂ.ಗಳ ಬಿಲ್ಲಿಂಗ್ ಪೂರ್ಣಗೊಂಡಿದೆ” ಎಂದು ಮಿಶ್ರಾ ಹೇಳಿದ್ದಾರೆ.
2022 ರಲ್ಲಿ ನಿಧಿಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದಾಗಿನಿಂದ ದೇಶಾದ್ಯಂತ ಜನರು ಉದಾರವಾಗಿ ಹಣವನ್ನು ನೀಡಿದ್ದಾರೆ ಎಂದಿದ್ದಾರೆ.
ನವೆಂಬರ್ 25 ರಂದು ನಿಗದಿಯಾಗಿರುವ ಧ್ವಜಾರೋಹಣ ಸಮಾರಂಭಕ್ಕೆ ಈ ಎಲ್ಲಾ ದಾನಿಗಳನ್ನು ಆಹ್ವಾನಿಸಲಾಗುವುದು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ದೇವಾಲಯದ ಶಿಖರದ ಮೇಲೆ ಧ್ವಜ ಸ್ಥಾಪನೆ ಮಾಡಲಿದ್ದಾರೆ. 70 ಎಕರೆ ವಿಸ್ತೀರ್ಣದ ದೇವಾಲಯ ಸಂಕೀರ್ಣದಲ್ಲಿರುವ ಶೇಷಾವತಾರ ದೇವಸ್ಥಾನ, ಕುಬೇರ ತಿಲ ಮತ್ತು ಸಪ್ತ ಮಂಟಪಕ್ಕೂ ಮೋದಿ ಭೇಟಿ ನೀಡುವ ನಿರೀಕ್ಷೆಯಿದೆ.
ಮಿಶ್ರಾ ಪ್ರಕಾರ, ಒಂದೇ ಸಮಯದಲ್ಲಿ 5,000 ರಿಂದ 8,000 ಭಕ್ತರಿಗೆ ಮುಖ್ಯ ದೇವಾಲಯದೊಳಗೆ ಅವಕಾಶ ಕಲ್ಪಿಸಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



