ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಚಾಣಕ್ಯ ರಕ್ಷಣಾ ಸಂವಾದ 2025 ರ ಕರ್ಟನ್ ರೈಸರ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜನರಲ್ ದ್ವಿವೇದಿ, ಈ ವರ್ಷ ಇಲ್ಲಿಯವರೆಗೆ ಸುಮಾರು 31 ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ, ಅದರಲ್ಲಿ ಶೇಕಡಾ 61 ರಷ್ಟು ಪಾಕಿಸ್ತಾನಿ ಭಯೋತ್ಪಾದಕರು ಎಂದಿದ್ದಾರೆ.
ಇಂದು ಅಲ್ಲಿ ಯಾವುದೇ ಕಲ್ಲು ತೂರಾಟದ ಘಟನೆಗಳು ಮತ್ತು ಘೋಷಣೆ ಕೂಗುವ ಘಟನೆಗಳು ನಡೆಯುತ್ತಿಲ್ಲ. ಯಾವುದೇ ರೀತಿಯ ಯುದ್ಧಕ್ಕೆ ಪ್ರತಿಕ್ರಿಯಿಸಲು ಭಾರತ ಸಿದ್ಧವಾಗಿದೆ. ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ಪ್ರಾಯೋಜಿಸುವವರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದಿದ್ದಾರೆ.
ಆಪರೇಷನ್ ಸಿಂಧೂರ್ ಕೇವಲ ಟ್ರೇಲರ್ ಆಗಿದ್ದು, ಅದು 88 ಗಂಟೆಗಳಲ್ಲಿ ಕೊನೆಗೊಂಡಿತು ಎಂದ ಅವರು, ಭವಿಷ್ಯದಲ್ಲಿ ಯಾವುದೇ ಪರಿಸ್ಥಿತಿಗೆ ಭಾರತ ಸಿದ್ಧವಾಗಿದೆ. ಪಾಕಿಸ್ತಾನ ಎಂದಾದರೂ ತಪ್ಪು ಮಾಡಿದರೆ, ಭಾರತದೊಂದಿಗೆ ಜವಾಬ್ದಾರಿಯುತವಾಗಿ ವರ್ತಿಸುವುದು ಹೇಗೆ ಎಂದು ಭಾರತದ ಸಶಸ್ತ್ರ ಪಡೆಗಳು ನೆರೆಯ ರಾಷ್ಟ್ರಕ್ಕೆ ಕಲಿಸುತ್ತವೆ ಎಂದಿದ್ದಾರೆ.
ರಾಜ್ಯ ಪ್ರಾಯೋಜಿತ ಭಯೋತ್ಪಾದನೆ ಭಾರತಕ್ಕೆ ಕಳವಳಕಾರಿ, ಅದು ಪ್ರಗತಿ ಮತ್ತು ಅಭಿವೃದ್ಧಿಗೆ ಮಾರಕ. ಯಾವಾಗಲೂ ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಮಾತುಕತೆ ಮತ್ತು ಭಯೋತ್ಪಾದನೆ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದು ಭಾರತ ಹೇಳುತ್ತಲೇ ಬಂದಿದೆ ಎಂದಿದ್ದಾರೆ.
ಭಾರತೀಯ ಸೇನೆಯ ಪ್ರಮುಖ ಅಂತರರಾಷ್ಟ್ರೀಯ ವಿಚಾರ ಸಂಕಿರಣವಾದ ಚಾಣಕ್ಯ ರಕ್ಷಣಾ ಸಂವಾದದ ಮೂರನೇ ಆವೃತ್ತಿಯು ನವೆಂಬರ್ 27 ರಿಂದ 28 ರವರೆಗೆ ನವದೆಹಲಿಯಲ್ಲಿ ನಡೆಯಲಿದೆ ಎಂದು ಜನರಲ್ ದ್ವಿವೇದಿ ಮಾಹಿತಿ ನೀಡಿದರು. ಈ ವರ್ಷದ ಸಂವಾದದ ವಿಷಯ ‘ರೂಪಾಂತರಕ್ಕಾಗಿ ಸಾಧನೆ: ಸಶಕ್ತ, ಸುರಕ್ಷಿತ್ ಔರ್ ವಿಕ್ಷಿತ ಭಾರತ್’.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



