
ಮಾಸ್ಕೋ: ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಂಗಳವಾರ ಕ್ರೆಮ್ಲಿನ್ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮುಂಬರುವ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.
ಪುಟಿನ್ ಅವರು ಜೈಶಂಕರ್ ಅವರನ್ನು ಕ್ರೆಮ್ಲಿನ್ನಲ್ಲಿರುವ ಸೆನೆಟ್ ಅರಮನೆಯ ಪ್ರತಿನಿಧಿ ಕಚೇರಿಯಲ್ಲಿ ಬರಮಾಡಿಕೊಂಡರು ಎಂದು ಸರ್ಕಾರಿ ಸ್ವಾಮ್ಯದ TASS ಸುದ್ದಿ ಸಂಸ್ಥೆ ವರದಿ ಮಾಡಿದೆ.
“ಮುಂಬರುವ ವಾರ್ಷಿಕ ಭಾರತ ರಷ್ಯಾ ಶೃಂಗಸಭೆಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಪುಟಿನ್ ಅವರಿಗೆ ತಿಳಿಸಲಾಯಿತು. ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸಲಾಯಿತು. ನಮ್ಮ ಸಂಬಂಧಗಳ ಮತ್ತಷ್ಟು ಪ್ರಗತಿಯ ಕುರಿತು ಅವರ ದೃಷ್ಟಿಕೋನಗಳು ಮತ್ತು ಮಾರ್ಗದರ್ಶನವನ್ನು ಆಳವಾಗಿ ಗೌರವಿಸುತ್ತೇವೆ” ಎಂದು ಜೈಶಂಕರ್ ಹೇಳಿದ್ದಾರೆ.
ಕ್ರೆಮ್ಲಿನ್ ಬಿಡುಗಡೆ ಮಾಡಿದ ದೃಶ್ಯಗಳಲ್ಲಿ ಪುಟಿನ್ ಜೈಶಂಕರ್ ಅವರನ್ನು ಸ್ವಾಗತಿಸುತ್ತಿರುವುದು ಕಂಡುಬಂದಿದ್ದು, ಅವರ ಜೊತೆ ಭಾರತೀಯ ರಾಯಭಾರಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿ ಮಯಾಂಕ್ ಸಿಂಗ್ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



