
ನವದೆಹಲಿ: ಹಲವಾರು ನಾಗರಿಕರ ಸಾವಿಗೆ ಕಾರಣವಾದ ಅಫ್ಘಾನಿಸ್ಥಾನದ ಮೇಲೆ ಪಾಕಿಸ್ಥಾನ ನಡೆಸಿದ ಹೊಸ ದಾಳಿಗಳನ್ನು ಭಾರತ ಖಂಡಿಸಿದೆ.
ಸಂಘರ್ಷವನ್ನು ಕೊನೆಗೊಳಿಸಲು ಎರಡೂ ಕಡೆಯವರು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಎರಡು ತಿಂಗಳೊಳಗೆ ಎರಡೂ ಕಡೆಯವರ ನಡುವೆ ಹೊಸ ಘರ್ಷಣೆಗಳು ಭುಗಿಲೆದ್ದಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.
“ಗಡಿ ಘರ್ಷಣೆಗಳಲ್ಲಿ ಹಲವಾರು ಅಫ್ಘಾನ್ ನಾಗರಿಕರು ಸಾವನ್ನಪ್ಪಿರುವ ವರದಿಗಳನ್ನು ನಾವು ನೋಡಿದ್ದೇವೆ. ಮುಗ್ಧ ಅಫ್ಘಾನ್ ಜನರ ಮೇಲಿನ ಇಂತಹ ದಾಳಿಗಳನ್ನು ನಾವು ಖಂಡಿಸುತ್ತೇವೆ. ಭಾರತವು ಅಫ್ಘಾನಿಸ್ಥಾನದ ಪ್ರಾದೇಶಿಕ ಸಮಗ್ರತೆ, ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯವನ್ನು ಬಲವಾಗಿ ಬೆಂಬಲಿಸುತ್ತದೆ” ಎಂದು ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ ಸಾಪ್ತಾಹಿಕ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.
ಅಫ್ಘಾನಿಸ್ಥಾನದ ತಾಲಿಬಾನ್ ಆಡಳಿತದ ವಕ್ತಾರರು ಪಾಕಿಸ್ಥಾನವೇ ದಾಳಿಯನ್ನು ಪ್ರಾರಂಭಿಸಿತು ಮತ್ತು ಕಾಬೂಲ್ ಪ್ರತಿಕ್ರಿಯಿಸುವುದು ಅನಿವಾರ್ಯವಾಯಿತು ಎಂದಿದ್ದಾರೆ.
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷವು ಅಕ್ಟೋಬರ್ ಆರಂಭದಲ್ಲಿ ಕಾಬೂಲ್ ಮೇಲೆ ಪಾಕಿಸ್ತಾನದ ವಾಯುದಾಳಿಯ ನಂತರ ಪ್ರಾರಂಭವಾಯಿತು. ದಾಳಿಗೆ ಅಫ್ಘಾನಿಸ್ತಾನವು ಬಲವಾಗಿ ಪ್ರತಿಕ್ರಿಯಿಸಿತು, ಅದರ ನಂತರ ಸಂಘರ್ಷ ಉಲ್ಬಣಗೊಂಡಿತು.
ಅಫ್ಘಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡಿದ್ದಾಗ ಯುದ್ಧಗಳು ಭುಗಿಲೆದ್ದವು. 2021 ರಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡ ನಂತರ ನಡೆದ ಘರ್ಷಣೆಗಳು ಅತ್ಯಂತ ಭೀಕರವಾಗಿದ್ದವು.
ಕತಾರ್ ಮತ್ತು ಟರ್ಕಿಯೆ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ನಂತರ ಅಕ್ಟೋಬರ್ 19 ರಂದು ಎರಡೂ ಕಡೆಯವರು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದವು. ಆದರೆ ಸಹಿಯ ಬಳಿಕವೂ ಸಂಘರ್ಷ ಮುಂದುವರೆದಿರುವುದು ಆತಂಕ ಸೃಷ್ಟಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



