
ಲಕ್ನೋ: ಉತ್ತರಪ್ರದೇಶ ಸರ್ಕಾರವು ಅಕ್ರಮ ನುಸುಳುಕೋರರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ವಾರಣಾಸಿಯಾದ್ಯಂತ ಪೊಲೀಸರು ಕಾರ್ಯಾಚರಣೆಯನ್ನು ಬಿಗಿಗೊಳಿಸಿದ್ದು, ʼಆಪರೇಷನ್ ಟಾರ್ಚ್ʼ ಅಡಿ ಅಕ್ರಮ ನಿವಾಸಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಮಾಧೋಪುರ್ ಪ್ರದೇಶದಲ್ಲಿ ತಾತ್ಕಾಲಿಕ ಶಿಬಿರಗಳಲ್ಲಿ ವಾಸಿಸುವ ನಿವಾಸಿಗಳು ತಮ್ಮ ಗುರುತಿನ ದಾಖಲೆಗಳನ್ನು ಪ್ರಸ್ತುತಪಡಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ವಾರಣಾಸಿ ಪೊಲೀಸ್ ಕಮಿಷನರೇಟ್ ಪ್ರಕಾರ, ಜಿಲ್ಲೆಯಾದ್ಯಂತ 500 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಕಾರ್ಯಾಚರಣೆಯ ಸಮಯದಲ್ಲಿ ಅನುಮಾನಾಸ್ಪದ ಎಂದು ಗುರುತಿಸಲಾಗಿದೆ. ಒಂದು ವಾರದ ಒಳಗಡೆ ತಮ್ಮ ಗುರುತನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಅಕ್ರಮ ವಲಸಿಗರ ಸಮಸ್ಯೆಯನ್ನು ಪರಿಹರಿಸಲು, ಪೊಲೀಸರು ಕೊಳೆಗೇರಿಗಳು, ತಾತ್ಕಾಲಿಕ ವಸತಿ ಮತ್ತು ಕಾರ್ಮಿಕ ವಸತಿ ಕಾಲೋನಿಗಳಲ್ಲಿ ಒಂದು ವಾರದ ಪರಿಶೀಲನಾ ಅಭಿಯಾನ ‘ಟಾರ್ಚ್’ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿಯೇ, ದಾಖಲೆಗಳು, ಗುರುತಿನ ಚೀಟಿಗಳು ಮತ್ತು ಕುಟುಂಬದ ವಿವರಗಳು ಅಸಮಂಜಸ ಅಥವಾ ಅಪೂರ್ಣವಾಗಿದ್ದ ನೂರಾರು ವ್ಯಕ್ತಿಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ಇಂತಹ ಶಿಬಿರದಲ್ಲಿ ವಾಸಿಸುವ ಜನರು ಕೂಡ ಅಕ್ರಮ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಲು ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



