
ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಸೆಮಿಸ್ಟರ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೊಂದಕ್ಕೆ ಆಯ್ಕೆ ಮಾಡಿದ ಪ್ರಶ್ನೆಯು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಈ ವಿಷಯವನ್ನು ಪರಿಶೀಲಿಸಲು ವಿಶ್ವವಿದ್ಯಾಲಯವು ತನಿಖಾ ಸಮಿತಿಯನ್ನು ಸಹ ರಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರೊ.ವೀರೇಂದ್ರ ಬಾಲಾಜಿ ಶಹಾರೆಯವರು ರಚಿಸಿದ ಈ ವಾರದ ಆರಂಭದಲ್ಲಿ ನಡೆದ BA ಸೋಶಲ್ ವರ್ಕ್ ಸೆಮಿಸ್ಟರ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಿದ 15 ಅಂಕಗಳ ಪ್ರಶ್ನೆಯೊಂದು ವಿವಾದವನ್ನು ಸೃಷ್ಟಿಸಿದೆ.
ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆ ಪತ್ರಿಕೆಯ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ದೂರುಗಳು ಮತ್ತು ಆನ್ಲೈನ್ ಪ್ರತಿಕ್ರಿಯೆಗಳು ಬರಲಾರಂಭಿಸಿದ ಬಳಿಕ ವಿಶ್ವವಿದ್ಯಾನಿಲಯವು ಅಧ್ಯಾಪಕರ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯನ್ನು “ಗಂಭೀರವಾಗಿ ಪರಿಗಣಿಸಲಾಗಿದೆ” ಎಂದು ಹೇಳಿ ತನಿಖಾ ಸಮಿತಿಯನ್ನು ರಚಿಸಿದೆ. ಅಲ್ಲದೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ, ಸಂಬಂಧಪಟ್ಟ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೈಕ್ಷಣಿಕ ಜವಾಬ್ದಾರಿ ಮತ್ತು ಸಾಂಸ್ಥಿಕ ಶಿಸ್ತನ್ನು ಎತ್ತಿ ಹಿಡಿಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಸಿಎ ಶೇಖ್ ಸಫಿವುಲ್ಲಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



