
ಮಂಗಳೂರು: ನಗರದ ಡಾ.ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಜ.10 ಮತ್ತು ಜ.11ರಂದು 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ನಡೆಯಲಿದೆ. ಈ ಲಿಟ್ ಫೆಸ್ಟ್ನ ಉದ್ಘಾಟನಾ ಕಾರ್ಯಕ್ರಮ 10ರಂದು ನಡೆಯಲಿದ್ದು, ಶತಾವಧಾನಿ ಆರ್. ಗಣೇಶ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಿಥಿಕ್ ಸೊಸೈಟಿಯ ರವಿ ಎಸ್ ಹಾಗೂ ಲೇಖಕ ಅಜಕ್ಕಳ ಗಿರೀಶ್ ಭಟ್ ಭಾಗವಹಿಸಲಿದ್ದಾರೆ. ಅಂದು ಮೀನಾಕ್ಷಿ ಜೈನ್ ಜೊತೆ ವಿಶೇಷ ಸಂವಾದವು ನಡೆಯಲಿದೆ.
ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ‘ರಾ’ದ ಮಾಜಿ ಮುಖ್ಯಸ್ಥ ವಿಕ್ರಂ ಸೂದ್, ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಮಹಿಳಾ ಕಾಯಂ ಪ್ರತಿನಿಧಿಯಾಗಿದ್ದ ರುಚಿರಾ ಕಾಂಬೋಜ್, ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿದ್ದ ಟಿ.ಎಸ್. ತಿರುಮೂರ್ತಿ, ಎಎನ್ಐ ಸಂಪಾದಕೀಯ ನಿರ್ದೇಶಕಿ ಸ್ಮಿತಾ ಪ್ರಕಾಶ್, ಪದ್ಮಜಾ ಜೋಶಿ, ಪಿ.ಶೇಷಾದ್ರಿ, ಮಾಳವಿಕಾ ಅವಿನಾಶ್ ಮತ್ತು ಪಲ್ಲವಿ ರಾವ್ ಕಾರಂತ್, ಲೇಖಕಿ,ನಟಿ ರಂಜನಿ ರಾಘವನ್, ನಟಿ ಪೂರ್ಣಿಮಾ ಸುರೇಶ್ ಮತ್ತು ಲೇಖಕಿ ಸೀಮಾ ಬುರುಡೆ ಸೇರಿದಂತೆ 65ಕ್ಕೂ ಹೆಚ್ಚು ಚಿಂತಕರು ಈ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತಿ ದಿ. ಎಸ್.ಎಲ್. ಭೈರಪ್ಪ ಅವರಿಗೆ ಗೌರವ ಸಲ್ಲಿಸಲು ವಿಶೇಷ ಗೋಷ್ಠಿ ಆಯೋಜಿಸಲಾಗಿದ್ದು, ಶತಾವಧಾನಿ ಆರ್.ಗಣೇಶ್ ಮತ್ತು ಜಿ.ಬಿ. ಹರೀಶ ಭಾಗವಹಿಸಲಿದ್ದಾರೆ. ಪತ್ರಕರ್ತ ವಿಶ್ವೇಶ್ವರ ಭಟ್ ಅವರ ‘ಬದುಕುಳಿದವರು ಕಂಡಂತೆ’ ಪುಸ್ತಕ ಸಂವಾದ ನಡೆಯಲಿದೆ.
ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ, ಉಜ್ವಲಾ ಕೃಷ್ಣರಾಜ್ ಅವರಿಂದ ಬೊಂಬೆಯಾಟ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರವೇಶ ಉಚಿತ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



