
ಹೈದರಾಬಾದ್: ತೆಲಂಗಾಣ ಸರ್ಕಾರವು ತಮ್ಮ ವೃದ್ಧ ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವಿರುದ್ಧ ಹೊಸ ಕಾನೂನನ್ನು ತರಲು ಯೋಜಿಸುತ್ತಿದೆ.
ಕೆಲವು ಹಿರಿಯ ನಾಗರಿಕರನ್ನು ಅವರ ಮಕ್ಕಳು ನಿರ್ಲಕ್ಷಿಸುತ್ತಿದ್ದಾರೆ. ಹೀಗಾಗಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ತಮ್ಮ ಸರ್ಕಾರವು ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನದಿಂದ ಶೇಕಡಾ 10-15 ರಷ್ಟು ಕಡಿತಗೊಳಿಸಿ, ಆ ಮೊತ್ತವನ್ನು ಪೋಷಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಕಾನೂನು ಪರಿಚಯಿಸಲಿದೆ ಎಂದು ಘೋಷಿಸಿದ್ದಾರೆ.
“ಪೋಷಕರನ್ನು ನೋಡಿಕೊಳ್ಳದವರು ಸಮಾಜದ ಬಗ್ಗೆ ತಮ್ಮ ಜವಾಬ್ದಾರಿಯನ್ನು ಪೂರೈಸುತ್ತಿಲ್ಲ ಎಂದೇ ನಾವು ಹೇಳಬಹುದು” ಎಂದಿದ್ದಾರೆ.
ತಮ್ಮ ಸರ್ಕಾರವು ಹಿರಿಯ ನಾಗರಿಕರಿಗಾಗಿ ‘ಪ್ರಾಣಾಮ್’ – ಡೇ ಕೇರ್ ಸೆಂಟರ್ಗಳನ್ನು ಸ್ಥಾಪಿಸುತ್ತಿದೆ. ವಯಸ್ಸಾದ ಪೋಷಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
“ನಮ್ಮ ಹಿರಿಯರು ಘನತೆಯಿಂದ ಬದುಕುವುದನ್ನು ಖಚಿತಪಡಿಸಿಕೊಳ್ಳಲು ಇದು ಮಾನವೀಯ ಕ್ರಮವಾಗಿದೆ” ಎಂದಿದ್ದಾರೆ.
ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಟ್ರಾನ್ಸ್ಜೆಂಡರ್ ಸಮುದಾಯಕ್ಕೆ “ಪ್ರತಿ ಪುರಸಭೆಯಲ್ಲಿ one- co-option ಹುದ್ದೆ”ಯನ್ನು ಕಾಯ್ದಿರಿಸಲಾಗುವುದು. ರಾಜ್ಯದ ಎಲ್ಲಾ ನಾಗರಿಕರಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಲು ಸರ್ಕಾರವು ಬಜೆಟ್ ಅಧಿವೇಶನದಲ್ಲಿ ಆರೋಗ್ಯ ನೀತಿಯನ್ನು ಘೋಷಿಸಲಿದೆ ಎಂದು ರೆಡ್ಡಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


