
ಬೈಂದೂರು: ಆಧ್ಯಾತ್ಮಿಕ ಲೋಕದಲ್ಲಿ ಕುಂಭಮೇಳಕ್ಕೆ ಎಷ್ಟು ಮಹತ್ವವಿದೆಯೋ, ಅಷ್ಟೇ ಪಾವಿತ್ರ್ಯತೆಯೊಂದಿಗೆ ಬೈಂದೂರು ಕ್ಷೇತ್ರದ ಗೋಳಿಹೊಳೆಯಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ವ್ರತಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜುಲೈ 28 ರಿಂದ ಆರಂಭವಾಗಲಿರುವ ಈ ಅನುಷ್ಠಾನವು ಬೈಂದೂರಿನ ಪಾಲಿಗೆ ಆಧ್ಯಾತ್ಮಿಕ ಕುಂಭಮೇಳದಂತಹ ಭವ್ಯ ಅನುಭವವನ್ನು ನೀಡಲಿದೆ.
ಈ ಮಹೋನ್ನತ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗೋಳಿಹೊಳೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಸಚಿವರಾದ ಮಾಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಸರ್ವ ಜನರ ಹಿತೈಷಿಯಾಗಿ ನಡೆಯುತ್ತಿರುವ ಈ ಕಾರ್ಯಕ್ರಮದ ರೂಪುರೇಷೆಗಳನ್ನು ಚರ್ಚಿಸಲಾಯಿತು.
ಸಭೆಯಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಜು ಪೂಜಾರಿ, ಕೆ.ಆರ್ ನಾಯ್ಕ್, ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶೇಖರ್ ಪೂಜಾರಿ, ಚಾತುರ್ಮಾಸ್ಯ ಸಂಚಾಲಕ ಶಿವರಾಜ್ ಪೂಜಾರಿ, ಅಶೋಕ್ ಪೂಜಾರಿ ಬೀಜಾಡಿ, ನರಸಿಂಹ ಪೂಜಾರಿ ಪಡುಕೋಣೆ, ಗಣೇಶ್ ಪೂಜಾರಿ ಕೆಂಚನೂರು, ಸಂತೋಷ್ ಪೂಜಾರಿ ಕರ್ಕುಂಜೆ, ಗೋವಿಂದ್ ಪೂಜಾರಿ, ಕಂಬಳ ಸಮಿತಿ ಅಧ್ಯಕ್ಷ ಮಂಜು ಪೂಜಾರಿ ಸಸಿಹಿತ್ಲು, ಮತ್ತಿತರರು ಉಪಸ್ಥಿತರಿದ್ದು ಈ ಧಾರ್ಮಿಕ ಸಂಕಲ್ಪಕ್ಕೆ ಸಾಕ್ಷಿಯಾದರು.
ವಿನಾಯಕ ಶಕ್ತಿಯ ಸನ್ನಿಧಿಯಲ್ಲಿ ದಿನವೊಂದಕ್ಕೆ ಸಾವಿರಾರು ಭಕ್ತರ ಸಂಗಮವಾಗಬೇಕಿದೆ
ಈ 48 ದಿನಗಳ ಕಾಲ ಗೋಳಿಹೊಳೆಯ ಮಣ್ಣು ದೈವಿಕ ಕಂಪನದಿಂದ ಕೂಡಿರಲಿದೆ. ಇದು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವಲ್ಲ, ಜಿಲ್ಲೆಯ ಸಮಸ್ತ ಜನರ ಒಳಿತಿಗಾಗಿ ನಡೆಯುತ್ತಿರುವ ಶಕ್ತಿ ಯಜ್ಞ.
ನಿತ್ಯೋತ್ಸವ: ಪ್ರತಿದಿನ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆಗಳು ನೆರವೇರಲಿವೆ.
ಜಿಲ್ಲೆಯ ಕಲೆಗಳಾದ ಯಕ್ಷಗಾನ, ವೈವಿಧ್ಯಮಯ ಭಜನಾ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಸಭೆಗಳು ಮೇಳೈಸಲಿವೆ.
“ಈ ಚಾತುರ್ಮಾಸ್ಯವು ಬೈಂದೂರು ಕ್ಷೇತ್ರದ ಏಳಿಗೆಯ ಪಥದಲ್ಲಿ ಒಂದು ಮೈಲಿಗಲ್ಲಾಗಲಿದೆ” ಎಂದು ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಈ ಸಂದರ್ಭದಲ್ಲಿ ತಿಳಿಸಿದರು.
ಕುಂಭಮೇಳದ ಪಾವಿತ್ರ್ಯವನ್ನು ಸ್ಮರಿಸುವಂತೆ ನಡೆಯಲಿರುವ ಈ 48 ದಿನಗಳ ಕಾಲಾವಧಿಯಲ್ಲಿ, ಪ್ರತಿದಿನ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜನಮಾನಸದಲ್ಲಿ ಧಾರ್ಮಿಕ ಭಾವನೆಗಳನ್ನು ಜಾಗೃತಗೊಳಿಸಿ, ಕ್ಷೇತ್ರದ ಏಳಿಗೆಗೆ ಸಾಕ್ಷಿಯಾಗಲಿರುವ ಈ ಪುಣ್ಯ ಮಹೋತ್ಸವಕ್ಕೆ ಇಡೀ ಜಿಲ್ಲೆಯ ಜನತೆಯ ಧಾರ್ಮಿಕ ಹಬ್ಬವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


