
ನವದೆಹಲಿ: ಪಶ್ಚಿಮ ಬಂಗಾಳದ ಭವಾನಿಪುರ ಮತ್ತು ನಂದಿಗ್ರಾಮದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ , ಪಕ್ಷದ ಮುಂದಿನ ಗಮನ 2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಎಂದಿದ್ದಾರೆ.
“ಮಮತಾ ಬ್ಯಾನರ್ಜಿ, ತೇಜಶ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿಯಿತು, ಮುಂದಿನವರು ಅಖಿಲೇಶ್ ಯಾದವ್” ಎಂದು ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರನ್ನು ಉಲ್ಲೇಖಿಸಿ ಹೇಳಿದ್ದಾರೆ. ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಹಲವಾರು ಹಿಂಸಾಚಾರ ಘಟನೆಗಳಲ್ಲಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತರಿಗೆ ಗೌರವ ಸಲ್ಲಿಸಿದ ಅವರು, “ಅವರ ರಾಜಕೀಯ ವನವಾಸ ಪ್ರಾರಂಭವಾಗಿದೆ. ಅವರು 2021 ರಲ್ಲಿ ನಂದಿಗ್ರಾಮವನ್ನು ಕಳೆದುಕೊಂಡರು ಮತ್ತು ಈ ಬಾರಿ ಭವಾನಿಪುರವನ್ನು 15,000 ಕ್ಕೂ ಹೆಚ್ಚು ಮತಗಳಿಂದ ಕಳೆದುಕೊಂಡಿದ್ದಾರೆ” ಎಂದರು.
ತೃಣಮೂಲ ಕಾಂಗ್ರೆಸ್ ಅನ್ನು ಆಮ್ ಆದ್ಮಿ ಪಕ್ಷಕ್ಕೆ ಹೋಲಿಸಿದ ಅವರು, ಅದರ ಕಥೆ ಮುಗಿಯುತ್ತದೆ ಎಂದರು.
“ಬ್ಯಾನರ್ಜಿ ನೇತೃತ್ವದ ಪಕ್ಷವು ಭ್ರಷ್ಟ, ಕುಟುಂಬ ಆಧಾರಿತ ಮತ್ತು ಯಾವುದೇ ಸಿದ್ಧಾಂತವಿಲ್ಲದ ಪಕ್ಷ. ನಂದಿಗ್ರಾಮದ ಹಿಂದೂ ಜನರು ನನ್ನನ್ನು ಮತ್ತೆ ಗೆಲ್ಲಿಸಿದರು. ಅಲ್ಲಿ, ಇಡೀ ಮುಸ್ಲಿಂ ಮತಗಳು ಟಿಎಂಸಿಗೆ ಹೋದವು. ಹಿಂದೂ, ಸಿಖ್, ಬೌದ್ಧ ಮತ್ತು ಜೈನರು ನನಗೆ ಮತ ಹಾಕಿದರು. ಇದು ಹಿಂದೂತ್ವ, ಬಂಗಾಳ ಮತ್ತು ಪ್ರಧಾನಿ ಮೋದಿಯವರ ಗೆಲುವು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


