
ನವದೆಹಲಿ: ನಿಖರವಾಗಿ ಒಂದು ವರ್ಷಗಳ ಹಿಂದೆ ಈ ದಿನದಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿ ಭಯೋತ್ಪಾದನೆಗೆ ಧೈರ್ಯ, ನಿಖರತೆ ಮತ್ತು ಅಚಲ ದೃಢಸಂಕಲ್ಪದ ಮೂಲಕ ಭಾರತ ಉತ್ತರಿಸಿತ್ತು.
ಪಹಲ್ಗಾಮ್ನಲ್ಲಿ ನಡೆದ ಅತ್ಯಂತ ಹೇಯ ಭಯೋತ್ಪಾದಕ ಕೃತ್ಯಕ್ಕೆ ಪ್ರತಿಕಾರ ತೀರಿಸಲು ಬಯಸಿದ ಭಾರತವು ಭಯೋತ್ಪಾದನೆಯ ಮೂಲವನ್ನೇ ನಿರ್ಮೂಲನೆ ಮಾಡಲು ನಿರ್ಧರಿಸಿತು. ಈ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನಿರ್ಣಾಯಕ ನಾಯಕತ್ವದಲ್ಲಿ ಭಾರತವು ಭಯೋತ್ಪಾದನೆ ಮತ್ತು ಅದರ ಬೆಂಬಲಿಗರು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರಾಷ್ಟ್ರವು ಜಗತ್ತಿಗೆ ರವಾನಿಸಿತು.
ಕೇವಲ 22 ನಿಮಿಷಗಳಲ್ಲಿ, ಭಾರತದ ಸಶಸ್ತ್ರ ಪಡೆಗಳು ಅತ್ಯಂತ ನಿಖರವಾದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದನ್ನು ಕಾರ್ಯಗತಗೊಳಿಸಿ ಇತಿಹಾಸ ನಿರ್ಮಿಸಿದವು. ಒಂಬತ್ತು ಭಯೋತ್ಪಾದಕ ಕೇಂದ್ರಗಳನ್ನು ನಾಶಪಡಿಸಲಾಯಿತು, 100 ಕ್ಕೂ ಹೆಚ್ಚು ಭಯೋತ್ಪಾದಕರು ಮತ್ತು ಅವರ ಜಾಲಗಳನ್ನು ನಿರ್ಮೂಲನೆ ಮಾಡಲಾಯಿತು ಮತ್ತು ಭಯೋತ್ಪಾದನೆಯ ಮೂಲಸೌಕರ್ಯಕ್ಕೆ ಭಾರಿ ಹೊಡೆತ ನೀಡಲಾಯಿತು.
ಈ ಕಾರ್ಯಾಚರಣೆಯು ಭಾರತದ ಸಶಸ್ತ್ರ ಪಡೆಗಳ ಅಪ್ರತಿಮ ಶೌರ್ಯ ಮತ್ತು ನಿಖರತೆಯನ್ನು ಪ್ರದರ್ಶಿಸಿತು. ಇದು ಆತ್ಮನಿರ್ಭರ ಭಾರತದ ಬೆಳೆಯುತ್ತಿರುವ ಶಕ್ತಿಯನ್ನು ಪ್ರದರ್ಶಿಸಿತು, ಸ್ಥಳೀಯ ರಕ್ಷಣಾ ತಂತ್ರಜ್ಞಾನ ಮತ್ತು ಶಸ್ತ್ರಾಸ್ತ್ರಗಳು ಕಾರ್ಯಾಚರಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂಬುದನ್ನು ತೋರಿಸಿಕೊಟ್ಟಿತು.
ಒಂದು ವರ್ಷದ ನಂತರವೂ, ಆಪರೇಷನ್ ಸಿಂಧೂರ್ನ ಮನೋಭಾವ ರಾಷ್ಟ್ರವನ್ನು ಪ್ರೇರೇಪಿಸುತ್ತಲೇ ಇದೆ. ನಮ್ಮ ಭದ್ರತಾ ಪಡೆಗಳ ಧೈರ್ಯ ಮತ್ತು ತ್ಯಾಗವು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತಂದುಕೊಟ್ಟಿದೆ.
A year ago, during #OperationSindoor, our armed forces showcased their valour and gave a firm response to those who attacked our people. Every Indian is proud of our armed forces. As a mark of respect to our forces and their success during #OperationSindoor, let us all change our… pic.twitter.com/w4A3j1bGTw
— Narendra Modi (@narendramodi) May 7, 2026
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


