ಕೋಲ್ಕತ್ತಾ: ದೇಶದಾದ್ಯಂತ ಇರುವ ಹಿಂದೂಗಳು ದಸರಾ ವೇಳೆಯಲ್ಲಿ ದುರ್ಗಾಪೂಜೆ ನಡೆಸಿದ್ದಾರೆ. ಆದರೆ ಪಶ್ಚಿಮಬಂಗಾಳದ ಗ್ರಾಮವೊಂದರ ಹಿಂದೂಗಳು ಈ ಅವಕಾಶದಿಂದ ವಂಚಿತರಾಗಿದ್ದಾರೆ.
ಭಿರ್ಭುಮ್ ಜಿಲ್ಲೆಯ ನಲ್ಹಟಿ ಗ್ರಾಮದ ಜನರಿಗೆ 2012ರಿಂದ ದುರ್ಗಾ ಪೂಜೆ ನಡೆಸಲು ಅವಕಾಶವನ್ನು ನೀಡಲಾಗುತ್ತಿಲ್ಲ, ಅಲ್ಲಿನ ಜಿಲ್ಲಾಡಳಿತ ಅವರು ದುರ್ಗಾಪೂಜೆ ಮಾಡುವುದಕ್ಕೆ ನಿಷೇಧ ಹೇರಿದೆ.
ಈ ಗ್ರಾಮದಲ್ಲಿ ಮುಸ್ಲಿಮರು ಜಿಲ್ಲಾಡಳಿತದ ಮೇಲೆ ಒತ್ತಡ ಹೇರಿ ದುರ್ಗಾ ಪೂಜೆಗೆ ನಿಷೇಧ ಹೇರುವಂತೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಡಳಿತ ಕೋಮು ಉದ್ವಿಗ್ನತೆ ಉಂಟಾಗುವುದನ್ನು ತಡೆಯಲು ಈ ಕ್ರಮಕೈಗೊಂಡಿದ್ದೇವೆ ಎನ್ನುತ್ತಿದೆ.
ಈ ಗ್ರಾಮದಲ್ಲಿ ಗೋಹತ್ಯೆಯನ್ನು ಮಾಡಲು ಜಿಲ್ಲಾಡಳಿತ ನಿಷೇಧ ಹೇರಿತ್ತು, ಇದಕ್ಕೆ ಪ್ರತಿಯಾಗಿ ಮುಸ್ಲಿಮರು ಹಿಂದೂಗಳಿಗೆ ದುರ್ಗಾ ಪೂಜೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದರು ಎನ್ನಲಾಗಿದೆ.
ದೇಶದಲ್ಲಿ ಅಸಹಿಷ್ಣುತೆ ಸೃಷ್ಟಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿಯವರ ಜಾತ್ಯಾತೀತ ಸರ್ಕಾರ ಈ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.