ಮುಂಬಯಿ: ದೇಶದಲ್ಲಿ ದವಸ ಧಾನ್ಯಗಳ ಬೆಲೆ ಗಗನಕ್ಕೇರುತ್ತಿದೆ. ಮಧ್ಯವರ್ತಿಗಳು ಇವುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಿಟ್ಟಿರುವುದು ಕೂಡ ಇದಕ್ಕೆ ಒಂದು ಪ್ರಮುಖ ಕಾರಣವಾಗಿದೆ.
ಈಗಾಗಲೇ ದೇಶದಾದ್ಯಂತ ಅಕ್ರಮವಾಗಿ ಸಂಗ್ರಹಿಸಿಟ್ಟ ಅಪಾರ ಪ್ರಮಾಣದ ದವಸ ಧಾನ್ಯಗಳನ್ನು ವಶಪಡಿಸಲಾಗಿದೆ.
ಮುಂಬಯಿಯಲ್ಲಿ ಕಳೆದ 10 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಒಟ್ಟು 61,250 ಮೆಟ್ರಿಕ್ ಟನ್ಗಳಷ್ಟು ದವಸ ಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 440 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅ.19 ರಿಂದ ಮುಂಬಯಿ ಮತ್ತು ಥಾಣೆಯ ಸುಮಾರು 27 ಗೋಡೌನ್ಗಳ ಮೇಲೆ ದಾಳಿ ನಡೆಸಲಾಗಿದೆ. ನಾಗರಿಕ ಆಹಾರ ಪೂರೈಕಾ ಅಧಿಕಾರಿಗಳು ದಾಳಿಗಳನ್ನು ನಡೆಸುತ್ತಿದ್ದಾರೆ.
ಹಬ್ಬಗಳ ಸಂದರ್ಭದಲ್ಲಿ ಬೆಲೆಯೇರಿಕೆಯನ್ನು ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಬೇಳೆಕಾಳು, ಖಾದ್ಯ ತೈಲ, ತೈಲ ಬೀಜಗಳನ್ನು ಸಂಗ್ರಹಿಸಿಡುವುದಕ್ಕೆ ನಿರ್ಬಂಧ ವಿಧಿಸಿದೆ. ಈಗಾಗಲೇ ಬೇಳೆಕಾಳುಗಳ ಬೆಲೆ ಕೆಜಿಗೆ 200 ರೂಪಾಯಿ ದಾಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.