ನವದೆಹಲಿ: ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಾಭಾಬಾಯ್ ಪಟೇಲ್ ಅವರ 140ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ದೆಹಲಿಯ ರಾಜಪಥದಲ್ಲಿ ’ಏಕತಾ ಓಟ’ಕ್ಕೆ ಚಾಲನೆ ನೀಡಲಿದ್ದಾರೆ.
ಹಲವಾರು ಗಣ್ಯರು ಪಾಲ್ಗೊಳ್ಳುವ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ಆರಂಭವಾಗಿದೆ. ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೌತ್ ಬ್ಲಾಕ್, ನಾರ್ಥ್ ಬ್ಲಾಕ್, ರೈಲ್ ಭವನ್, ಸಿಎಸ್ಐಆರ್ ಕಟ್ಟಡ, ಕೃಷಿ ಭವನ್, ಶಾಸ್ತ್ರೀ ಭವನ್ ಸೇರಿದಂತೆ ಹಲವಾರು ಕಟ್ಟಡಗಳು ಈ ವೇಳೆ ಮುಚ್ಚಿರಲಿದೆ.
ದೇಶದ ಉಕ್ಕಿನ ಮನುಷ್ಯ ಎಂದು ಕರೆಯಲ್ಪಡುವ ಪಟೇಲ್ ಅವರು ಅ.30ರಂದು ಜನಿಸಿದ್ದು, ಈ ದಿನವನ್ನು ’ರಾಷ್ಟ್ರೀಯ ಐಕ್ಯತಾ’ ದಿನವನ್ನಾಗಿ ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.