ಮಂಗಳೂರು: ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಚರ್ಚ್ ಧ್ವಂಸಕ, ಕ್ರೈಸ್ತರ ಹಂತಕರಾಗಿದ್ದ ಟಿಪ್ಪು ಸುಲ್ತಾನನ ಜನ್ಮ ದಿನಾಚರಣೆಯನ್ನು ಕರ್ನಾಟಕ ಸರ್ಕಾರ, ಸರಕಾರದ ಖರ್ಚಿನಲ್ಲಿ ನಡೆಸಿಕೊಡುವುದು ನಿಜಕ್ಕೂ ದಿಗ್ಭ್ರಾಂತಿಯನ್ನುಂಟು ಮಾಡಿದೆ. ಸರಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನ.6 ರಂದು ಮಂಗಳೂರಿನಲ್ಲಿ ಜಿಲ್ಲಾಧಿಕಾರಿಯವರ ಕಛೇರಿ ಎದುರು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಎಸೋಸಿಯೇಶನ್ (ರಿ.) ಮಂಗಳೂರು ಇವರು ತಿಳಿಸಿದ್ದಾರೆ.
ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಸವಾಗಿದ್ದ ಕ್ರೈಸ್ತರನ್ನು ಟಿಪ್ಪು ಸುಲ್ತಾನ್ ತನ್ನ ಅಧಿಕಾರಾವಧಿಯಲ್ಲಿ ಪೀಡಿಸಿದ್ದನು. ಈ ಕೃತ್ಯವನ್ನು ಕೆನರಾ ಕ್ರೈಸ್ತರ ಬಂಧನವೆಂದು ಚರಿತ್ರೆಯಲ್ಲಿ ದಾಖಲಿಸಲಾಗಿದೆ. ಸುಮಾರು 80 ಸಾವಿರಕ್ಕೂ ಹೆಚ್ಚು ಜನ ಕ್ರೈಸ್ತರನ್ನು ಟಿಪ್ಪು ಬಂಧಿಸಿದ್ದ. ಕೆಲವರ ಹತ್ಯೆಯನ್ನೂ ಮಾಡಿದ್ದ. ಕರಾವಳಿಯಿಂದ ಶ್ರೀರಂಗಪಟ್ಟಣದವರೆಗೆ ಕಾಲ್ನಡಿಗೆಯಲ್ಲೇ ಬಂಧಿತರನ್ನು ಸಾಗಿಸುವಾಗ ಹಲವರು ಸಾವನ್ನಪ್ಪಿದ್ದರು. ಮಕ್ಕಳು ಮಹಿಳೆಯರು ಎನ್ನದೆ ಎಲ್ಲರನ್ನೂ ಬಂಧಿಸಿದ್ದ. ಟಿಪ್ಪುವಿನ ಮರಣಾನಂತರ ಕೇವಲ 20 ಸಾವಿರದಷ್ಟು ಜನರು ಮಾತ್ರ ಹಿಂತಿರುಗಿ ತಮ್ಮ ನೆಲೆಯನ್ನು ಮರು ಸ್ಥಾಪಿಸಿಕೊಂಡರು. ಇನ್ನುಳಿದವರು ಟಿಪ್ಪುವಿನ ಹಿಂಸೆಗೆ ಬಲಿಯಾಗಿದ್ದರು.
ರಕ್ತಸಿಕ್ತ ಇತಿಹಾಸವನ್ನು ಮತ್ತೆ ಕೆದಕಿ, ಸಂತ್ರಸ್ತರ ಗಾಯಗಳಿಗೆ ಉಪ್ಪು ಎರಚುವ ಕೆಲಸಕ್ಕೆ ಕರ್ನಾಟಕ ಸರಕಾರ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ. ಸರ್ಕಾರವು ಈ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆದು, ದುರುಳನೊಬ್ಬನ ವೈಭವೀಕರಣವನ್ನು ಕೊಂಡಾಡದೆ, ಕರ್ನಾಟಕದಲ್ಲಿ ಶಾಂತಿ ಸಮೃದ್ಧಿ ನೆಲೆಸಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಸರಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಸೋಸಿಯೇಶನ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.