ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ 2015 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವುದಕ್ಕಾಗಿ ‘ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ’ಯನ್ನು ಸ್ಥಾಪಿಸಿ ಜಾರಿಗೊಳಿಸುತ್ತಿದೆ. 2015ನೇ ಸಾಲಿನ ಪ್ರಶಸ್ತಿಗಾಗಿ ಶಿಫಾರಸುಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವವರನ್ನು ‘ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ’ಗಾಗಿ ಶಿಫಾರಸು ಮಾಡ ಬಹುದಾಗಿದೆ.
ಶಿಫಾರಸಿನಲ್ಲಿ ಸಾಧಕರ ಹೆಸರು, ಖಾಯಂ ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮೊದಲಾದ ಮೂಲ ಮಾಹಿತಿಗಳಿರಬೇಕು. ಒಂದು ಪಾಸ್ಪೋರ್ಟ್ ಗಾತ್ರದ ಭಾವಚಿತ್ರ ಸಹಿತ ವ್ಯಕ್ತಿಯ ಸಾಧನೆಯನ್ನು 200 ಶಬ್ದಗಳಿಗೆ ಮೀರದಂತೆ ವಿವರಿಸಿರತಕ್ಕದ್ದು. ಈಗಿನ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಶಿಫಾರಸುಗಳನ್ನು ದಶಂಬರ 4ರ ಸಂಜೆ 4 ಗಂಟೆಯ ಒಳಗಾಗಿ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಕಟ್ಟಡ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಇಲ್ಲಿಗೆ ಮುಚ್ಚಿದ ಕವರ್ನಲ್ಲಿ ಕಳುಹಿಸಿ ಕೊಡಬಹುದಾಗಿದೆ. ಶಿಫಾರಸುಗಳನ್ನು ಇಮೈಲ್ ಮೂಲಕವೂ ಕಳುಹಿಸಿ ಕೊಡಬಹುದು. ಇಮೈಲ್ ವಿಳಾಸ mangalorepressclub@gmail.com ಆಗಿರುತ್ತದೆ.
ಒಬ್ಬರು ಗರಿಷ್ಠ ಇಬ್ಬರು ಸಾಧಕರನ್ನು ಪ್ರಶಸ್ತಿಗೆ ಶಿಫಾರಸು ಮಾಡ ಬಹುದಾಗಿದೆ. ರಾಷ್ಟ್ರೀಯ- ಅಂತಾರಾಷ್ಟ್ರೀಯ ಸಾಧಕರನ್ನು ಒಳಗೊಂಡ ನಿರ್ಣಾಯಕರ ಮಂಡಳಿ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಿ ಪ್ರಕಟಿಸಲಿರುವುದು. ದಶಂಬರದಲ್ಲಿ ಜರಗುವ ಪ್ರೆಸ್ ಕ್ಲಬ್ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನವಿರುತ್ತದೆ ಎಂದು ಗುರುವಪ್ಪ ಬಾಳೆಪುಣಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.