ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ವ್ಯಾಪಕವಾಗಿ ಕೋಮು ಗಲಭೆ ಹೆಚ್ಚಾಗಿದ್ದು, ಕೊಲೆ ಮತ್ತು ಹಲ್ಲೆಗಳು ಸಾಮಾನ್ಯವಾಗಿರುವುದು ವಿಪರ್ಯಾಸ. ಇದರ ಬಗ್ಗೆ ಸಾರ್ವಜನಿಕರು ಪ್ರತಿಭಟನೆ, ಮನವಿಗಳ ಮೂಲಕ ಜಿಲ್ಲಾಡಳಿತ ಹಾಗೂ ಸರಕಾರದ ಗಮನ ಸೆಳೆಯಲು ಪ್ರಯತ್ನ ಪಟ್ಟರೂ ಕೂಡ ರಾಜ್ಯದ ಕಾಂಗ್ರೆಸ್ ಸರಕಾರ ಇದ್ಯಾವುದರ ಬಗ್ಗೆಯೂ ಲೆಕ್ಕಿಸುತ್ತಿಲ್ಲ ಬದಲಿಗೆ ಪ್ರಕರಣಗಳನ್ನೇ ತಿರುಚುವತ್ತ ಪ್ರೇರೇಪಿಸುತ್ತಿರುವಂತೆ ಕಾಣುತ್ತಿದೆ ಎಂದು ವಿಕಾಸ್ ಪುತ್ತೂರ್ ಅವರು ತಿಳಿಸಿದ್ದಾರೆ.
ಇತ್ತೀಚೆಗಿನ ಬಂಟ್ವಾಳದ ಅಮಾಯಕ ಹರೀಶ್ ಪೂಜಾರಿಯವರ ಹತ್ಯೆ ಪ್ರಕರಣವನ್ನು ಗಮನಿಸಿದರೆ, ನೊಂದ ಹರೀಶ್ ಕುಟುಂಬಕ್ಕೆ ಈ ಸರಕಾರ ನ್ಯಾಯ ಒದಗಿಸಿಕೊಡುವಂತೆ ಕಾಣುತ್ತಿಲ್ಲ. ಸಾವಿನಲ್ಲೂ ರಾಜಕಾರಣವನ್ನು ಮಾಡಲು ಹೊರಟಿರುವ ಸರಕಾರ ಕೃತ್ಯಯನ್ನು ನಿರಪರಾಧಿಗಳ ಮೇಲೆ ಕಟ್ಟಲು ಪ್ರಯತ್ನಿಸುತ್ತಿರುವಂತೆ ಕಾಣಿಸುತ್ತಿದೆ.
ಮೇಲ್ನೋಟಕ್ಕೆ ಹಾಗೂ ಸ್ಥಳೀಯರ ಅಭಿಪ್ರಾಯಗಳ ಪ್ರಕಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಗೂ, ಕೃತ್ಯಕ್ಕೂ ಸಂಬಂಧವಿರುವಂತೆ ಕಾಣುತ್ತಿಲ್ಲ, ಆದರೂ ತರಾತುರಿಯಲ್ಲಿ ಕೆಲವರನ್ನು ಬಂಧಿಸಿ, ಕಾಂಗ್ರೆಸ್ ನಾಯಕರುಗಳು ಈ ಬಗ್ಗೆ ಹೇಳಿಕೆಗಳನ್ನು ಪ್ರಕಟಿಸುತ್ತಿರುವುದು ಮತ್ತಷ್ಟು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ಆದ್ದರಿಂದ ಪೊಲೀಸ್ ಇಲಾಖೆ ನಿಷ್ಪಕ್ಷವಾದ ತನಿಖೆ ನಡೆಸಿ, ಅಮಾಯಕ ಹರೀಶ್ ಹತ್ಯೆಯ ಹಿಂದೆ ನಿಜವಾದ ಕುಮ್ಮಕ್ಕು ಯಾರದ್ದು ಎಂಬುದನ್ನು ಬಹಿರಂಗಪಡಿಸಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು.
ಅಂತೆಯೇ ಟಿಪ್ಪು ಜಯಂತಿ ಹಾಗೂ ಇತರ ಸರಕಾರಿ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಡೆಯುವ ಕೆಲಸವನ್ನು ಸರ್ಕಾರ ಕೂಡಲೇ ಕೈಬಿಟ್ಟು, ಬರುವ ದಿನಗಳಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಕಾರ್ಯನಿರತವಾಗಬೇಕು ಎಂದು ಯುವ ಮೋರ್ಚಾ ಆಗ್ರಹಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.