ಮಂಗಳೂರು : ಶಾರದಾ ಪ.ಪೂ. ಕಾಲೇಜಿನ ಧ್ಯಾನಮಂದಿರದಲ್ಲಿ ನಡೆದ ವೃತಿಪರ ಉನ್ನತ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಇದು ಸೂಕ್ತ ಸಮಯ. ತಮ್ಮ ಅಮೂಲ್ಯವಾದ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾರದಾ ಸಮೂಹ ಸಂಸ್ಧೆಗಳ ಸಲಹೆಗಾರರಾದ ಡಾ| ಲೀಲಾ ಉಪಾದ್ಯಾಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ರಾಮಕೃಷ್ಣ ಪಿ.ಯು. ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೋ ಹರೀಶ್ ಭಟ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಇದರ ಪ್ರಾಧ್ಯಾಪಕರಾದ ಪ್ರೊ. ವೆಂಕಟ ತೇಜಸ್ವಿ ಮತ್ತು ಪ್ರೊ|| ರಮೀಜ್ ಗೌಸ್, ಆಳ್ವಾಸ್ ಪಿ.ಯು. ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ ಅನೀಶ್ ಥಾಮಸ್, ಕೆನರಾ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರಾದ ಪ್ರೊ|| ನಾಗೇಶ್ ಶೆಣೈ, ಮುಂತಾದವರು ಭಾಗವಹಿಸಿ ಉನ್ನತ ಶಿಕ್ಷಣ ಹಾಗೂ ವ್ಯಾಪ್ತಿಯ ಬಗ್ಗೆ ಸಮಗ್ರ ಮಾಹಿತಿಗಳನ್ನು ನೀಡಿದರು. ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಡಾ| ಡಿ. ಶ್ರೀಪತಿ ರಾವ್, ರಸಾಯನ ಶಾಸ್ತ್ರವಿಭಾಗದ ಮುಖ್ಯಸ್ಥರಾದ ಪ್ರೊ|| ಪ್ರಕಾಶ್ ನಾಯ್ಕ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲಿಗೆ ವಿದ್ಯಾರ್ಥಿಗಳಾದ ರೇಶ್ಮಾ ಒಮೆನ್ ಸ್ವಾಗತಿಸಿ, ಅನಂತ್ ಕಾಮತ್ ವಂದಿಸಿ ಗ್ರಿಸೆಲ್ ಫರ್ನಾಂಡಿಸ್ ಕಾಂiiಕ್ರಮ ನಿರೂಪಣೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.