News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ನೈಜ ಮಾಹಿತಿಯನ್ನು ನೀಡಿ

Mangalore NEWSಮಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎ.11ರಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಯಶ್ವಸಿಯಾಗುವ ನಿಟ್ಟಿನಲ್ಲಿ ಮಂಗಳೂರಿನ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆ ನಡೆಯಿತು.

ರಾಜ್ಯ ಸರ್ಕಾರವು ಎ.11ರಿಂದ 30ರವರಗೆ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಯಶ್ವಸಿಯಾಗುವ ನಿಟ್ಟಿನಲ್ಲಿ ಲಾಲ್‌ಬಾಗ್ ನಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಅಲ್ಪಸಂಖ್ಯಾತ ಪ್ರಮುಖ ಮುಖಂಡ ಸಭೆ ನಡೆಯಿತು. ಸಭೆಯಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ನೈಜ ಮಾಹಿತಿಯನ್ನು ನೀಡಬೇಕೆಂಬ ಅಭಿಪ್ರಾಯ ಕೇಳಿ ಬಂತು. ಈ ಬಗ್ಗೆ ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿ ಸಾಬಿಲ್ ಅಹಮದ್ ಮುಲ್ಲಾ ಮಾತನಾಡಿ, ಸಮೀಕ್ಷೆಯು ಯಶ್ವಸಿಯಾಗಿಸುವ ನಿಟ್ಟಿನಲ್ಲಿ ಸರಿಯಾದ ಮಾಹಿತಿ ನೀಡಬೇಕು ಎಂದರು. ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖ ಮುಖಂಡರು ಉಪಸ್ಥಿತಿರಿದ್ದರು.

ಯಾವುದೇ ಧರ್ಮ, ಸಂಘಟನೆಗಳ ನಡುವೆ ವಿವಾದ ಸೃಷ್ಠಿಯಾದರೆ ಪೊಲೀಸ್ ಹಾಗೂ ವಕ್ಫ್ ಬೋರ್ಡಿಗೆ ಮೊರೆ ಹೋಗುವುದು ಸರಿಯಲ್ಲ. ಅದನ್ನು ನಮ್ಮ ಮಧ್ಯೆಯೇ ಬಗೆಹರಿಸುವ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಸಲಹೆ ನೀಡಿದ್ದಾರೆ.

ಮಂಗಳೂರಿನ ಕಂಕನಾಡಿಯಲ್ಲಿರುವ ಜಂಇಯ್ಯತುಲ್ ಫಲಾಹ್ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಕ್ಫ್ ಇಲಾಖೆಯಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಪಾಲ್ಗೊಂಡು ಮಾತನಾಡಿ, ನಾವು ಎಲ್ಲಿ ತನಕ ಸುಧಾರಣೆ ಆಗುವುದಿಲ್ಲವೋ, ಅಲ್ಲಿ ತನಕ ಸಮಾಜ ಸುಧಾರಣೆ ಆಗಲ್ಲ, ಸರ್ಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಲೋಪ ದೋಷ ಕುರಿತು ಪರಿಹಾರ ಮಾಡುವ ಪ್ರಯತ್ನ ಮಾಡಬೇಕು. ಧರ್ಮದಲ್ಲಿ ವಿವಾದ ಸೃಷ್ಟಿ ಆದರೆ ಪೊಲೀಸ್‌ರಿಗೆ ಹಾಗೂ ವಕ್ಫ್ ಮಂಡಳಿಗೆ ದೂರು ನೀಡುವುದನ್ನು ಬಿಟ್ಟು ನಮ್ಮೊಳಗೆ ಬಗ್ಗೆಹರಿಸುವ ಪ್ರಯತ್ನ ಮಾಡಬೇಕೆಂದರು.

ಬಳಿಕ ಡಿಸಿಪಿ ಸಂತೋಷ್ ಬಾಬು ಮಾತನಾಡಿ, ಎಲ್ಲಾ ಧಾರ್ಮಿಕ ಸಂಸ್ಥೆಗಳಲ್ಲಿ ಸಿಸಿ ಕ್ಯಾಮರ ಅಳವಡಿಸಿಕೊಳ್ಳುವುದರಿಂದ ಅಹಿತಕರ ಘಟನೆ ತಡೆಯಲು ಸಾಧ್ಯ. ಯಾವುದೇ ಘಟನೆ ಸಂಬಂಧಿಸಿದಾಗ ಸ್ಥಳೀಯ ಪೊಲೀಸ್ ಠಾಣೆಗೆ ಸಂಪರ್ಕಿಸುವ ಕೆಲಸ ಮಾಡಬೇಕು. ಅದು ನಮ್ಮ ಸಮಾಜ ಸೇವೆ ಎಂದು ತಿಳಿದುಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ರಾಜ್ಯ ವಕ್ಫ್ ಸದಸ್ಯ ಮಹಮ್ಮದ್ ಕುಂಞಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ ರಶೀದ್ ಹಾಜಿ, ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿ ಸಾಬಿಲ್ ಅಹಮದ್ ಮುಲ್ಲಾ ಮತ್ತಿತರು ಉಪಸ್ಥಿತಿರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top