ನವದೆಹಲಿ: ಅಧಿಕಾರಿ ಹಾಗೂ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಸಂಜೀವ್ ಚತುರ್ವೇದಿ ತಮ್ಮ ಪ್ರಶಸ್ತಿಯ 30,000 ಡಾಲರ್ ಹಣವನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ನಲ್ಲಿ ಠೇವಣಿ ಮಾಡಲು ವಿಫಲಗೊಂಡಿದ್ದು, ಈ ಹಣವನ್ನು ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಗೆ ದಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಸಚಿವಾಲಯವು ಪ್ರಶಸ್ತಿ ಹಣವನ್ನು ಏಮ್ಸ್ ಖಾತೆಗೆ ಜಮೆ ಮಾಡಲು ವಿಳಂಬ ಮಾಡುತ್ತಿದೆ. ಇದು ತನ್ನನ್ನು ಉದ್ದೇಶಪೂರ್ವಕವಾಗಿ ಅವಮಾನಿಸಲು ಮಾಡಲಾಗುತ್ತಿದೆ ಎಂದು ಚತುರ್ವೇದಿ ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ಆರೋಗ್ಯ ಸಚಿವಾಲಯ ಹಾಗೂ ಏಮ್ಸ್ ಈ ಹಣವನ್ನು ಜಮೆ ಮಾಡಲು ಈಗಾಗಲೇ ಸಾಕಷ್ಟು ಸಮಯವನ್ನು ವ್ಯರ್ಥ ಮಾಡಿದ್ದು, ಹೊಂದಾಣಿಕೆ ಮಾಡುತ್ತಿಲ್ಲ. ಆದ್ದರಿಂದ ಪ್ರಶಸ್ತಿಯ ಸಂಪೂರ್ಣ ಹಣವನ್ನು ಪ್ರಾಧಾನಿ ರಾಷ್ಟ್ರೀಯ ಪರಿಹಾರ ನಿಧಿಗೆ ದಾನ ನೀಡುವುದಾಗಿ ಈ ಸಂದರ್ಭ ಹೇಳಿದ್ದಾರೆ.
ಭ್ರಷ್ಟಾಚಾರ ಪ್ರಕರಣವನ್ನು ಬಹಿರಂಗಗೊಳಿಸಿದ್ದಕ್ಕಾಗಿ 2015ನೇ ಸಾಲಿನ ರಮಣ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ಇಬ್ಬರು ಭಾರತೀಯರಲ್ಲಿ ಸಂಜೀವ್ ಚತುರ್ವೇದಿ ಒಬ್ಬರಾಗಿದ್ದು, ಇವರು ತಮ್ಮ ಪ್ರಶಸ್ತಿ ಹಣವನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಏಮ್ಸ್ಗೆ ದಾನ ನೀಡಿದ್ದರು. ಚತುರ್ವೇದಿ ಅವರು ಪ್ರಸ್ತುತ ಏಮ್ಸ್ನ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.