ನವದೆಹಲಿ: ವಿದ್ಯಾರ್ಥಿಗಳು ಸ್ಪರ್ಧೆ ಮಾಡಲಿ ಜೊತೆಗೆ ಪರಸ್ಪರ ಸಹಕರಿಸುವ ಮತ್ತು ವಿವಿಧ ಸಂಸ್ಕೃತಿಗಳ ಬಗ್ಗೆ ತಿಳಿದುಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸುವ ಕಾರ್ಯ ಮಾಡಲಿ ಎಂದು ಕೇಂದ್ರ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ನಾಲ್ಕು ದಿನಗಳ ’ಕಲಾ ಉತ್ಸವ’ ಉದ್ಘಾಟಿಸಿದ ಅವರು, ನೀವು ಸ್ಪರ್ಧಾತ್ಮಕ ಚೈತನ್ಯದೊಂದಿಗೆ ದೇಶದ ವಿವಿಧ ಭಾಗದಿಂದ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದೀರಿ, ನಿಮ್ಮ ಜೀವನದ ಪಯಣವನ್ನು ಪರಸ್ಪರ ಹಂಚಿಕೊಳ್ಳಿ ಎಂದು ಕರೆ ನೀಡಿದರು.
ತಮಿಳುನಾಡಿನಾದ್ಯಂತ ಸುರಿದ ಮಳೆಯನ್ನು ಲೆಕ್ಕಿಸದೆ ಉತ್ಸವದಲ್ಲಿ ಪಾಲ್ಗೊಂಡ ಹಲವು ವಿದ್ಯಾರ್ಥಿಗಳನ್ನು ಪ್ರಶಂಸಿದರು. ಸ್ಪರ್ಧಾತ್ಮಕ ಭಾವದಿಂದ ಬಂದಿರುವ ವಿದ್ಯಾರ್ಥಿಗಳು ಸಹಜ ಮತ್ತು ದೇಶಭಕ್ತಿಯ ಭಾವದೊಂದಿಗೆ ಹಿಂದಿರುಗಬೇಕು ಎಂದರು.
ಉತ್ಸವಕ್ಕೆ ದೇಶದಾದ್ಯಂತ ಸುಮಾರು ೧೪೦೦ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಈ ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ಗೆಳೆತನದೊಂದಿಗೆ ಇತರ ರಾಜ್ಯಗಳ ಭಾಷೆ, ಸಂಸ್ಕೃತಿಗಳನ್ನು ಕಲಿಯುವ ಮೂಲಕ ಜ್ಞಾನ ವೃದ್ದಿಸಬೇಕು ಎಂದು ಸೂಚಿಸಿದರು.
ಮೊದಲ ಮೂರು ದಿನಗಳ ಕಾಲ ಹಲವು ಸ್ಪರ್ಧೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಉತ್ಸವದ ಭಾಗವಾಗಿ ನೃತ್ಯ, ಸಂಗೀತ, ರಂಗಭೂಮಿ ಪ್ರದರ್ಶನ, ದೃಶ್ಯ ಕಲೆ ಪ್ರದರ್ಶನ ಮುಂತಾದ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಸರ್ಕಾರದ ’ಬೇಟಿ ಬಚಾವೋ, ಬೇಟಿ ಪಢಾವೋ’ ಉಪಕ್ರಮದ ಅಂಗವಾಗಿ ಈ ಪ್ರದರ್ಶನಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಸಿರಿ ಫೋರ್ಟ್ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮದೊಂದಿಗೆ ಉತ್ಸವ ಕೊನೆಗೊಳ್ಳಲಿದೆ ಎಂದು ಈ ಸಂದರ್ಭ ತಿಳಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.