ಬಂಟ್ವಾಳ : ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವ್ಯಕ್ತಿತ್ವ ವಿಕಸನ ಮತ್ತು ಬಹುಮುಖ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು.
ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ಎಸ್.ವಿ.ಎಸ್ ವಿದ್ಯಾಗಿರಿಯಲ್ಲಿ ನಡೆದ ತಾಲೂಕು ಮಟ್ಟದ ರೇಂಜರ್ಸ್- ರೋವರ್ಸ್, ಸ್ಕೌಟ್ಸ್-ಗೈಡ್ಸ್, ಕಬ್ಸ್, ಬುಲ್ಬುಲ್ಸ್ ವಾರ್ಷಿಕ ರ್ಯಾಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಜನೆಯ ನಡುವೆ ಶಿಸ್ತು, ಸಂಯಮ, ಸಹಬಾಳ್ವೆ, ನಿರ್ದಿಷ್ಟ ಗುರಿ, ಸೇವೆ, ಭಾವೈಕ್ಯತೆ, ರಾಷ್ಟ್ರ ಪ್ರೇಮ, ಸಂಘಜೀವನ, ಬೆರೆಯುವಿಕೆ, ಸಹಸಮಯ ಕ್ರಿಯೆ,ಕ್ರೀಡೆ ಮತ್ತು ದೇಶದ ಚಿತ್ರಣ, ಸಂಸ್ಕಾರ, ಸಂಸ್ಕೃತಿ ಪಡೆಯಲು ಇಂತಹ ಕಾರ್ಯಕ್ರಮ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಮಕ್ಕಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಶಾಲೆಯಲ್ಲಿ ಎಲ್ಲಾ ಚಟುವಟಿಕೆಗಳು ನಡೆಯುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ವಹಿಸಿದ್ದರು. ಪಥ ಸಂಚಲನೆಯನ್ನು ನಗರ ಠಾಣಾ ಎ.ಎಸ್.ಐ. ಸೇಸಮ್ಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗೋಳ್ತಮಜಲು ಹಜ್ಜಾಜ್ ಗ್ರೂಫ್ ಆಫ್ ಇಂಡಸ್ಟ್ರೀಸ್ ಮಾಲಕ ಹಾಜೀ ಮಹಮ್ಮದ್ ಹನೀಫ್, ಎಸ್.ವಿ.ಎಸ್ ವಿದ್ಯಾಗಿರಿಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಗದೀಶ್ ಯಡಪಡಿತ್ತಾಯ, ಸಿದ್ಧಕಟ್ಟೆ ವಿಜಯ ಬ್ಯಾಂಕ್ ಪ್ರಬಂಧಕ ಬೇಬಿ ಕುಂದರ್, ಎಸ್.ವಿ.ಎಸ್ ವಿದ್ಯಾಗಿರಿಯ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವೆಂಕಟೇಶ್ ಭಟ್, ಅನುದಾನಿತ ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ ರಾವ್, ಉದ್ಯಮಿ ಹಾಜೀ ಎನ್. ಸುಲೈಮಾನ್, ಮಾಣಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ, ಪಾಣೆಮಂಗಳೂರು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಕಾರಂತ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾ. ಸಮನ್ವಯಾಧಿಕಾರಿ ಗುರುನಾಥ ಬಿ. ಬಾಗೇವಾಡಿ, ಎಸ್.ವಿ.ಎಸ್ ವಿದ್ಯಾಗಿರಿಯ ಮುಖ್ಯೋಪಾಧ್ಯಾಯ ಸೋಮನಾಥ ಭಟ್ ಮತ್ತು ಬಿಆರ್ಪಿ ರವಿಕಲಾ ಉಪಸ್ಥಿತರಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಬಂಟ್ವಾಳ ಅಧ್ಯಕ್ಷ ಬಿ.ಎಮ್. ತುಂಬೆ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಬಂಟ್ವಾಳ ಕಾರ್ಯದರ್ಶಿ ಐತಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ದೇವದಾಸ್ ಬೆಂಜನಪದವು ಪ್ರಸ್ತಾವಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.