ಚೆನ್ನೈ: ತಮಿಳುನಾಡಿನಾದ್ಯಂತ ಇತ್ತೀಚೆಗೆ ಸಂಭವಿಸಿದ ಪ್ರವಾಹ, ಜಲಪ್ರಳಯದಿಂದಾಗಿ ನಾಗರಿಕ ಸೇವಾ ಪರೀಕ್ಷೆ ಬರೆಯಲಿರುವ ಸಾವಿರಾರು ವಿದ್ಯಾಥಿಗಳು ಸಮಸ್ಯೆ ಎದುರಿಸುತ್ತಿದ್ದು, ವಿದ್ಯಾರ್ಥಿಗಳು ಸಕಲ ಸಿದ್ಧತೆ ನಡೆಸಲು ಈ ಪರೀಕ್ಷೆಯನ್ನು 2 ತಿಂಗಳ ಅವಧಿಗೆ ಮುಂದೂಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ವು ಡಿ.18ರಿಂದ 23ರ ವರೆಗೆ ನಾಗರಿಕ ಸೇವಾ (ಮುಖ್ಯ) ಪರೀಕ್ಷೆ, 2015 ನಡೆಸಲು ಪ್ರಸ್ತಾಪಿಸಿದೆ. ಆದರೆ ಚೈನ್ನೈನಲ್ಲಿ ಇತ್ತೀಚೆಗೆ ಪ್ರವಾಹದಿಂದ ಉಂಟಾದ ಹಾನಿಯು ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿದ್ಯಾರ್ಥಿಗಳು ಚೈನ್ನೈಯನ್ನು ಪರೀಕ್ಷಾ ಕೇಂದ್ರವನ್ನಾಗಿ ಬಳಸುತ್ತಿದ್ದು, ತಮಿಳಾಡಿನಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಡಿದ್ದರಿಂದ ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಈ ತೀವ್ರ ಪ್ರಮಾಣದ ವಿಪತ್ತು ಜನರಿಗೆ ದೊಡ್ಡ ಮಟ್ಟದಲ್ಲಿ ಬಾಧಿಸುತ್ತಿದ್ದು, ಕೇಂದ್ರ ಲೋಕಸೇವಾ ಆಯೋಗಕ್ಕೆ ತಿಳಿಸುವ ಮೂಲಕ ಈ ಪರೀಕ್ಷೆಯನ್ನು ಕನಿಷ್ಟ 2 ತಿಂಗಳ ಅವಧಿಗೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರವಾಹದಿಂದಾಗಿ ಹಲವು ಶಾಲಾ ಹಾಗೂ ವಿಶ್ವವಿದ್ಯಾಲಯ ಮಟ್ಟದ ಪರೀಕ್ಷೆಗಳನ್ನು ಈಗಾಗಲೇ ಅಲ್ಲಿನ ಸರ್ಕಾರ ಮುಂದೂಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.