News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಳಲಂಬೆ ದೇವಸ್ಥಾನ ಬ್ರಹ್ಮಕಲಶೋತ್ಸವ ; ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ

ಸುಬ್ರಹ್ಮಣ್ಯ:ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಂಬಂಧವಾಗಿ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮದ ಬಗ್ಗೆ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಪದಾಧಿಕಾರಿಗಳು ಮಾಹಿತಿ ನೀಡಿದರು.

Valalambe_14_12

ಈ ಸಂದರ್ಭ ಸುಳ್ಯ ಶಾಸಕ ಎಸ್.ಅಂಗಾರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ತಳೂರು, ಸುಳ್ಯ ಜನಜಾಗೃತಿ ವೇದಿಕೆಯ ಪಿ.ಸಿ.ಜಯರಾಂ, ಪದ್ಮನಾಭ ಶೆಟ್ಟಿ ಮರ್ಕಂಜ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಬೆಳ್ಯಪ್ಪ ಗೌಡ, ಸಂಚಾಲಕ ವೆಂಕಟ್ ವಳಲಂಬೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಕೋಶಾಧಿಕಾರಿ ರಾಧಾಕೃಷ್ಣ ಮಾವಿನಕಟ್ಟೆ, ಬ್ರಹ್ಮಕಲಶೋತ್ಸವದ ಸ್ವಯಂಸೇವಕ ಸಮಿತಿಯ ಪ್ರಮುಖ್ ಲೋಕೇಶ್ವರ ಡಿ. ಆರ್, ಬ್ರಹ್ಮಕಲಶೋತ್ಸವ ಸಮಿತಿ ಜೊತೆಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top