News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಐಡಿ ಪ್ರಾಥಮಿಕ ವರದಿ ಸಲ್ಲಿಸದಂತೆ ಹೈಕೋರ್ಟ್ ತಡೆ

CBIಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸದಂತೆ ಹೈಕೋರ್ಟ್ ಸರ್ಕಾರಕ್ಕೆ ಮಧ್ಯಂತರ ತಡೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ವಿಧಾನಸಭೆಯಲ್ಲಿ ಸಿಐಡಿ ತನಿಖೆಯ ಪ್ರಾಥಮಿಕ ವರದಿಯನ್ನು ಪ್ರಸ್ತುತಪಡಿಸಲು ಮುಂದಾಗಿದ್ದರು. ಆದರೆ ಅದಕ್ಕೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣದಲ್ಲಿ ಕೇಳಿಬಂದಿರುವ ಮಹಿಳಾ ಅಧಿಕಾರಿಯ ಪತಿಯ ಮನವಿಯನ್ನು ಪುರಸ್ಕರಿಸಿ ಹೈಕೋರ್ಟ್ ಈ ಆದೇಶ ನೀಡಿದೆ. ತನಿಖೆ ಸಂಪೂರ್ಣಗೊಳ್ಳದೆ ವರದಿಯನ್ನು ಬಹಿರಂಗಪಡಿಸಲು ಅವಕಾಶ ನೀಡಬಾರದು ಎಂದು ಅವರು ಮನವಿ ಮಾಡಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಇಂದು ಸಿದ್ದರಾಮಯ್ಯನವರು ಪ್ರಕರಣವನ್ನು ಸಿಬಿಐಗೆ ಒಳಪಡಿಸುವ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

Tags: , ,

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top