ನವದೆಹಲಿ: ಪಠಾನ್ಕೋಟ್ ವಾಯುನೆಲೆಯ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರು ಭಾರತಕ್ಕೆ ಭರವಸೆಯನ್ನೇನೋ ನೀಡಿದ್ದಾರೆ. ಆದರೆ ಅವರ ಬದ್ಧತೆಯ ಬಗ್ಗೆ ಹಲವಾರು ಪ್ರಶ್ನೆಗಳು ಮೂಡಿವೆ.
ಒಂದು ಮೂಲದ ಪ್ರಕಾರ ಜೈಶೇ ಮೊಹಮ್ಮದ್ ಸಂಘಟನೆಯ ಉಗ್ರರು ಪಠಾನ್ಕೋಟ್ ಮೇಲೆ ದಾಳಿ ನಡೆಸುವ ಮುಂಚೆ ಪಾಕಿಸ್ಥಾನದ ವಾಯುನೆಲೆಯೊಂದರಲ್ಲಿ ಅಭ್ಯಾಸದ ಸಲುವಾಗಿ ಅಣಕು ಪ್ರದರ್ಶನ ನಡೆಸಿದ್ದಾರೆ. ಇಂತಹ ಹಲವಾರು ತರಬೇತಿಗಳನ್ನು ಪಡೆದೇ ಅವರು ಭಾರತದ ವಾಯುನೆಲೆ ಮೇಲೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ.
ವಾಯುನೆಲೆಯೊಂದರಲ್ಲಿ ಇಂತಹ ಅಣಕು ಪ್ರದರ್ಶನ ನಡೆಸಬೇಕಾದರೆ ಅಲ್ಲಿನ ಮಿಲಿಟರಿಯ ಅಥವಾ ಐಎಸ್ಐನ ಸಹಕಾರ ಇರಲೇ ಬೇಕು.
ಪಾಕ್ ಪ್ರಧಾನಿ ನವಾಝ್ ಶರೀಫ್ ಅವರು ಮಂಗಳವಾರ ಪಠಾನ್ಕೋಟ್ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭರವಸೆ ನೀಡಿದ್ದಾರೆ. ಆದರೆ ವರದಿಗಳು ಅವರ ಬದ್ಧತೆಯನ್ನು ಪ್ರಶ್ನಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.