ನವದೆಹಲಿ: ಗಣರಾಜ್ಯೋತ್ಸವದ ವೇಳೆ ಪ್ರಧಾನಿ ನರೇಂದ್ರ ಮೋದಿಯ ಹತ್ಯೆಗೆ ಸಂಚು ರೂಪಿಸುತ್ತಿರುವ ಇಸಿಸ್ ಉಗ್ರರು, ಇದಕ್ಕಾಗಿ ಮಕ್ಕಳನ್ನು ಸುಸೈಡ್ ಬಾಂಬರ್ಗಳನ್ನಾಗಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದೆ.
12 ವರ್ಷದಿಂದ 15 ವರ್ಷ ವಯಸ್ಸಿನ ಮಕ್ಕಳನ್ನು ಸುಸೈಡ್ ಬಾಂಬರ್ಗಳನ್ನಾಗಿ ಸೃಷ್ಟಿಸಿ ಅವರನ್ನು ಮೋದಿ ವಿರುದ್ಧ ದಾಳಿ ನಡೆಸಲು ನಿಯೋಜಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶಸ್ತ್ರಾಸ್ತ್ರಗಳ ಬಳಕೆಯಲ್ಲಿ ನೈಪುಣ್ಯತೆ ಪಡೆದಿರುವ ಈ ವಯಸ್ಸಿನ ಮಕ್ಕಳನ್ನು ಗಡಿಯ ಮೂಲಕ ಭಾರತಕ್ಕೆ ಪ್ರವೇಶಿಸುವಂತೆ ಮಾಡಲಾಗಿದೆ ಎಂದು ಗುಪ್ತಚರ ಮಾಹಿತಿ ನೀಡಿದೆ.
ಕಳೆದ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿ ತಮ್ಮ ಕಾರಿನಿಂದ ಇಳಿದು, ಸೆಕ್ಯುರಿಟಿಯನ್ನು ಮುರಿದು ರೆಡ್ಫೋರ್ಟ್ ನಲ್ಲಿ ನೆರೆದಿದ್ದ ಶಾಲಾ ಮಕ್ಕಳನ್ನು ಭೇಟಿಯಾಗಿದ್ದರು. ಇದನ್ನು ಸೂಕ್ಷ್ಮವಾಗಿ ಗಮನಿಸಿರುವ ಉಗ್ರರು ಶಾಲಾ ಸಮವಸ್ತ್ರ ತೊಟ್ಟ ಸುಸೈಡ್ ಬಾಂಬರ್ನಿಂದ ದಾಳಿ ನಡೆಸುವ ಸಂಚು ರೂಪಿಸುತ್ತಿದೆ ಎನ್ನಲಾಗಿದೆ.
ಈ ಬಾರಿ ಸೆಕ್ಯುರಿಟಿಯನ್ನು ಮುರಿದು ಮಕ್ಕಳ ಬಳಿ ಹೋಗದಂತೆ ಮೋದಿಗೆ ಗುಪ್ತಚರ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.