News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ

48727_thumpಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಈ ಬಾರಿ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಪ್ರಧಮ ಬಾರಿಗೆ ನೆಲ ಬಾಂಬ್ ಪತ್ತೆದಳವನ್ನು ನಿಯೋಜಿಸಲಾಗಿದೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರರ ಬಂಧನದ ಹಿನ್ನಲೆ ಬೆಂಗಳೂರಿನಾದ್ಯಂತ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ.ಈ ಕಾರ್ಯಕ್ರಮಕ್ಕೆ 5000 ಮಂದಿ ಪೊಲೀಸ್ ಸಿಂಬಂಧಿಗಳನ್ನು ನಿಯೋಜಿಸಿದ್ದು, ಸಿಸಿಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಈ ಬಾರಿ ಭದ್ರತೆಯ ದೃಷ್ಟಿಯಿಂದಾಗಿ 8-30 ರೊಳಗೆ ತಲುಪಬೇಕಾಗಿದ್ದು ಅದರನಂತರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದೆ. ರಾಜ್ಯಪಾಲರು 8-58 ಕ್ಕೆ ಮೈದಾನ ತಲುಪಲ್ಲಿದ್ದು 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ತದನಂತರ ಕಾರ್ಯಕ್ರಮಗಳು ಮುಂದುವರಿಯಲಿದೆ.

ಈ ಬಾರಿ ಗಣರಾಜ್ಯೋತ್ಸವದ ಭಧ್ರತಾ ದೃಷ್ಟಿಯಿಂದ ಹಲವು ಭದ್ರತಾಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದುನಗರ ಪೊಲೀಸ್ ಆಯುಕ್ತ ಎಸ್.ಎನ್. ಮೇಘರಿಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top