News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಸಿಸ್‌ ಆಕರ್ಷಣೆ ತಡೆಯಲು ಧರ್ಮಗುರುಗಳ ಸಹಾಯ ಪಡೆದ ಕೇಂದ್ರ

singhನವದೆಹಲಿ: ದಕ್ಷಿಣ ಭಾರತದ ಹಲವಾರು ಮುಸ್ಲಿಂ ಯುವಕರು ಭಯಾನಕ ಉಗ್ರ ಸಂಘಟನೆ ಇಸಿಸ್‌ನತ್ತ ಆಕರ್ಷಿತರಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಕೇಂದ್ರ ಸರ್ಕಾರ ಹಲವಾರು ಪ್ರಯತ್ನಗಳನ್ನು ನಡೆಸುತ್ತಿದೆ.

ಇದೀಗ ಗೃಹಸಚಿವ ರಾಜನಾಥ್ ಸಿಂಗ್ ಅವರು ತೆಲಂಗಾಣ, ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಮುಸ್ಲಿಂ ಧರ್ಮಗುರುಗಳನ್ನು ಭೇಟಿಯಾಗಿ ಇಸಿಸ್ ಅಪಾಯದ ಬಗ್ಗೆ ಯುವಕರಿಗೆ ತಿಳಿಸುವಂತೆ ಕೋರುತ್ತಿದ್ದಾರೆ.

ಮಂಗಳವಾರ ಅವರು ಉತ್ತರಭಾರತದ ಹಲವಾರು ಮುಸ್ಲಿಂ ಧರ್ಮಗುರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾವುದ್ದೀನ್ ಓವೈಸಿಯನ್ನು ಕೂಡ ಇಸಿಸ್ ವಿರುದ್ಧ ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ.

ಭಾರತದ ಗುಪ್ತಚರ ಮಾಹಿತಿಯ ಪ್ರಕಾರ ಇದುವರೆಗೆ ಭಾರತದ ೨೫ ಯುವಕರು ಇಸಿಸ್ ಸೇರಿಕೊಂಡಿದ್ದಾರೆ. ಇದರಲ್ಲಿ ಆರು ಮಂದಿ ಮೃತರಾಗಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top