ಮಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿಯುತ್ತಿರುವ ಸಹಸ್ರಾರು ಉಪನ್ಯಾಸಕರು ಕಳೆದ 25 ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದು, ಉಪನ್ಯಾಸಕರಿಲ್ಲದೆ ಕೆಲವು ಕಾಲೇಜುಗಳು ಮುಚ್ಚಿದ್ದು, ವಿದ್ಯಾರ್ಥಿಗಳ ಭವಿಷ್ಯ ಡೋಲಾನಮಾನವಾಗಿದೆ.
ಅತಿಥಿ ಉಪನ್ಯಾಸಕರಿಗೆ ನೀಡಬೇಕಾದ ಗೌರವಧನವನ್ನು ಸಹ ಸರಿಯಾಗಿ ನೀಡದೆ ಸತಾಯಿಸಲಾಗುತ್ತಿದೆ. ಅತಿಥಿ ಉಪನ್ಯಾಸಕರು ಕುರಿತು ಸರ್ಕಾರ ನಿರ್ಲಕ್ಷ ವಹಿಸಿದ್ದರಿಂದ ಓರ್ವ ಅತಿಥಿ ಉಪನ್ಯಾಸಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಬೇಸರ ವ್ಯಕ್ತಪಡಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಈ ಕೂಡಲೇ ಕ್ರಮಕೈಗೊಳ್ಳಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಲ್ಲದೇ ಸರಕಾರ ಅತಿಥಿ ಉಪನ್ಯಾಸಕರಿಗೆ ನೀಡಲಾಗುವ ಸಂಭಾವನೆಯನ್ನು ಯುಜಿಸಿ ಮಾನದಂಡದಂತೆ ಹೆಚ್ಚಿಸುವುದು . ಯು.ಜಿ.ಸಿ. ನಿಗದಿತ ಅರ್ಹತೆಯನ್ನು ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಅವರು ಸಲ್ಲಿಸಿದ ಸೇವೆಯ ಪ್ರಮಾಣಕ್ಕೆ ತಕ್ಕಂತೆ ಗ್ರೇಸ್ ಮಾರ್ಕ್ಸ್ ನೀಡಿ ಖಾಯಂ ನೇಮಕಾತಿಮಾಡುವುದು . ರಾಜ್ಯದಲ್ಲಿ ಮುರಾರ್ಜಿ ಶಾಲೆಯ ಅತಿಥಿ ಶಿಕ್ಷಕರಿಗೆ ಕಲ್ಪಿಸಿದಂತೆ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ವಿಶೇಷ ಕಾಯ್ದೆಯನ್ನು ರಚಿಸಿ ನೇಮಕಾತಿ.
ಪ್ರತಿ ವರ್ಷವು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯನ್ನು ನಡೆಸುವ ಬದಲು ಹೊಸ ಹುದ್ದೆಗಳಿಗೆ ಮಾತ್ರ ಆಯ್ಕೆ ಪ್ರಕ್ರಿಯೆ ಕೈಗೊಂಡು ಹಿಂದಿನ ವರ್ಷಗಳಲ್ಲಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಕೈಬಿಡದೆ ಅವರ ಸೇವೆಯನ್ನು ಹಾಗೆಯೇ ಮುಂದುವರೆಸುವುದು. ಅತಿಥಿ ಉಪನ್ಯಾಸಕರಿಗೆ ನಿಗದಿತ ದಿನಾಂಕಕ್ಕೆ ಸರಿಯಾಗಿ ಮಾಸಿಕ ಗೌರವಧನವನ್ನು ಪಾವತಿಸಲು ಕ್ರಮಕೈಗೊಳ್ಳುವುದು. ಆತ್ಮಹತ್ಯೆಗೆ ಶರಣಾದ ಮಾಗಡಿ ತಾಲೂಕು ಕುದೂರು ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಶ್ರೀ ಲಕ್ಷ್ಮೀಕಾಂತ್ ಕುಟುಂಬದವರಿಗೆ ಪರಿಹಾರ ನೀಡುವುದು.ಸೇರಿದಂತೆ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.