ರಾಷ್ಟ್ರೀಯ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪಿಡಿಪಿ ಮುಖ್ಯಮಂತ್ರಿ ಅಭ್ಯರ್ಥಿ ಮೆಹಬೂಬಾ ಮುಫ್ತಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಈ ಹಿಂದೆ ಮೆಹಬೂಬಾ ಮುಫ್ತಿಯವರ ತಂದೆ ಮುಫ್ತಿ ಮೊಹಮದ್ ಸೈಯಿದ್ ಜಮ್ಮು -ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದರು. ಅವರ ಸಾವಿನ ಬಳಿಕ ಸಿಎಂ ಸ್ಥಾನ ತೆರವಾಗಿತ್ತು. ಪ್ರಸ್ತುತ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರಕಾರವಿದ್ದು ಮೈತ್ರಿ ಮುಂದುವರೆಸಲು ಮೆಹಬೂಬಾ ಮುಫ್ತಿಯವರು ಸಿಎಂ ಸ್ಥಾನ ಸೇರಿದಂತೆ ಕೆಲವು ಬೇಡಿಕೆಗಳನ್ನಿಟ್ಟಿದ್ದಾರೆ.
ಈ ಹಿಂದೆ ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ರಾಮ್ ಮಾಧವ್ ಪ್ರಮುಖ ಪಾತ್ರವಹಿಸಿದ್ದರು. ಈಗ ಮತ್ತೊಮ್ಮೆ ಮಾತಕತೆ ಮೂಲಕ ಗೊಂದಲಕ್ಕೆ ತೆರೆ ಎಳೆಯಲು ರಾಮ್ ಮಾಧವ್ ಮುಂದಾಗಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.