ನವದೆಹಲಿ: ನಿವೃತ್ತ ಶಿಕ್ಷಕರನ್ನು ಬಳಸಿಕೊಂಡು 18 ರಾಜ್ಯಗಳಲ್ಲಿ ಆಯಾ ಸರ್ಕಾರಗಳ ಸಹಕಾರದೊಂದಿಗೆ ಪರೀಕ್ಷಾರ್ಥ ಯೋಜನೆಯೊಂದನ್ನು ಜಾರಿಗೊಳಿಸಲು ಮಾನವ ಸಂಪನ್ಮೂಲ ಸಚಿವಾಲಯ ಮುಂದಾಗಿದೆ.
ನಿವೃತ್ತಿಗೊಂಡಿರುವ ಅಪಾರ ಜನಸಂಖ್ಯೆಯನ್ನು ಶಿಕ್ಷಕರನ್ನು ಸದ್ಬಳಕೆ ಮಾಡಿಕೊಳ್ಳುವ ಐಡಿಯಾ ಪ್ರಧಾನಿ ನರೇಂದ್ರ ಮೋದಿಯವರದ್ದು, ಮಾಜಿ ಶಿಕ್ಷಕರನ್ನು ಮತ್ತೆ ಶಿಕ್ಷಕರನ್ನಾಗಿಸಿ ಶಿಕ್ಷಕರಿಗೇ ಮಾರ್ಗದರ್ಶನ ಮಾಡುವ ಕಾರ್ಯಕ್ಕೆ ನಿಯೋಜನೆ ಮಾಡುವ ಉದ್ದೇಶವಿದೆ. ಈ ಯೋಜನೆ ಸ್ವಯಂಪ್ರೇರಿತರಿಗಾಗಿದ್ದು, ಇಷ್ಟ ಇದ್ದವರು ಮಾತ್ರ ಸೇರಿಕೊಳ್ಳಬಹುದು.
ಟೀಚರ್ಸ್ ಎಜ್ಯುಕೇಶನ್ ಇನ್ಸ್ಟಿಟ್ಯೂಶನ್ಗಳಲ್ಲಿ ನಿವೃತ್ತ ಶಿಕ್ಷಕರ ಅನುಭವವನ್ನು ಬಳಸಿಕೊಳ್ಳುವ ಉದ್ದೇಶ ಸರ್ಕಾರದ್ದು.
ಎಪ್ರಿಲ್-ಮೇ ತಿಂಗಳಲ್ಲಿ ವಿಚಾರಸಂಕಿರಣಗಳನ್ನು ಏರ್ಪಡಿಸಲಾಗುತ್ತಿದ್ದು, ಶಿಕ್ಷಕರಿಗೆ, ಪ್ರಾಂಶುಪಾಲರುಗಳಿಗೆ ತರಬೇತಿಯನ್ನು ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.