ನವದೆಹಲಿ: 2004ರ ಇಶ್ರತ್ ಜಹಾನ್ ಎನ್ಕೌಂಟರ್ ಪ್ರಕರಣದಲ್ಲಿ ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ತೀವ್ರ ಒತ್ತಡವನ್ನು ಹಾಕಲಾಗಿತ್ತು ಎಂದು ಗುಪ್ತಚರ ಇಲಾಖೆಯ ಮಾಜಿ ವಿಶೇಷ ನಿರ್ದೇಶಕ ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಗುಜರಾತ್ ಮೂಲದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಇಶ್ರತ್ ಜಹಾನ್ ಪ್ರಕರಣದಲ್ಲಿ ಮೋದಿಯನ್ನು ಸಿಲುಕಿಸುವ ಪಿತೂರಿಯ ಮಾಸ್ಟರ್ಮೈಂಡ್ ಆಗಿದ್ದರು ಎಂಬ ಆಘಾತಕಾರಿ ಮಾಹಿತಿ ನೀಡಿದ್ದಾರೆ.
ಮೋದಿ ಯುಪಿಎಗೆ ದೊಡ್ಡ ಸವಾಲಾಗಿ ಬೆಳೆಯುತ್ತಿರುವುದನ್ನು ತಡೆಯುವ ಸಲುವಾಗಿ ಅವರನ್ನು ಸಿಲುಕಿಸುವ ಪ್ರಯತ್ನವನ್ನು ನಡೆಸಲಾಯಿತು. ಅವರ ವಿರುದ್ಧ ನನಗೆ ಹೇಳಿಕೆ ನೀಡುವಂತೆಯೂ ಒತ್ತಡ ಹೇರಲಾಯಿತು. ನಿವೃತ್ತಿಯ ಬಳಿಕ ದೊಡ್ಡ ಸ್ಥಾನ ನೀಡುವ ಆಮಿಷವನ್ನೂ ನೀಡಲಾಯಿತು ಎಂದು ರಾಜೇಂದ್ರ ಕುಮಾರ್ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.