ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಉಪನ್ಯಾಸಕ ಎಸ್ಎಆರ್ ಗಿಲಾನಿಯನ್ನು ದೇಶದ್ರೋಹದ ಆರೋಪದ ಮೇರೆಗೆ ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದೆ.
ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ವಿರುದ್ಧ ಘೋಷಣೆ ಕೂಗಿದ ಆರೋಪದ ಮೇರೆಗ ಈತನನ್ನು ಬಂಧನಕ್ಕೆ ಒಳಪಡಿಸಲಾಗಿದೆ.
ಈ ಕಾರ್ಯಕ್ರಮದ ಮುಖ್ಯ ಆಯೋಜಕ ಗಿಲಾನಿಯಾಗಿದ್ದು, ಆ ಕಾರಣಕ್ಕಾಗಿ ಆತನನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಪ್ರೆಸ್ ಕ್ಲಬ್ ಕಾರ್ಯಕ್ರಮ ಫೆ.10ರಂದು ನಡೆದಿದ್ದು, ಇಲ್ಲಿ ಜೆಎನ್ಯು ವಿದ್ಯಾರ್ಥಿಗಳು, ಗಿಲಾನಿಯಂತಹ ಇತರರು ಉಗ್ರ ಅಫ್ಜಲ್ ಗುರು ಮತ್ತು ಪಾಕಿಸ್ಥಾನದ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಅಷ್ಟೇ ಅಲ್ಲದೇ ಭಾರತದ ವಿರುದ್ಧ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಜೆಎನ್ಯುನಲ್ಲಿ ನಡೆದ ದೇಶದ್ರೋಹದ ಘಟನೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಪ್ರೆಸ್ ಕ್ಲಬ್ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಗಿಲಾನಿ ವಿರುದ್ಧ ದೇಶದ್ರೋಹದ ಐಪಿಸಿ ಸೆಕ್ಷನ್ 124ಎ, ಅಪರಾಧ ಪಿತೂರಿ 120ಬಿ, ಕಾನೂನು ಬಾಹಿರ ಒಟ್ಟು ಸೇರುವಿಕೆ 149ನ್ನು ಜಡಿಯಲಾಗಿದೆ.
2001ರ ಸಂಸತ್ತು ದಾಳಿ ಆರೋಪದಲ್ಲಿ ಗಿಲಾನಿ ಸಿಲಿಕಿದ್ದ, ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ದೆಹಲಿ ಹೈಕೋರ್ಟ್ ಈತನನ್ನು ದೋಷಮುಕ್ತಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.