ನವದೆಹಲಿ: ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಉಪ ಚುನಾವಣೆ ನಡೆದಿದ್ದು, ಕರ್ನಾಟಕ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ತೆಲಂಗಾಣ ಮತ್ತಿತರ ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ಉತ್ತರ ಪ್ರದೇಶದ ಮುಜಫರ್ನಗರ, ಬೈಕಾಪುರ, ದಿಯೋಬಂದ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಸಮಾಜವಾದಿ ಪಕ್ಷ ಮುಜಫರ್ನಗರ ಹಾಗೂ ದಿಯೋಬಂದ್ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆರ್ಎಲ್ಡಿ ಪಕ್ಷ ಬೈಕಾಪುರದಲ್ಲಿ ಮುನ್ನಡೆ ಸಾಧಿಸಿದೆ.
ಕರ್ನಾಟಕದ ದೇವದುರ್ಗ, ಬೀದರ್, ಹೆಬ್ಬಾಳ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ದೇವದುರ್ಗ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಬೀದರ್ನಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸುತ್ತಿದೆ. ದೇವದುರ್ಗದಲ್ಲಿ ಶೇ.61, ಹೆಬ್ಬಾಳದಲ್ಲಿ ಶೇ.46 ಹಾಗೂ ಬೀದರ್ನಲ್ಲಿ ಶೇ.56 ಮತದಾನ ನಡೆದಿತ್ತು.
ತೆಲಂಗಾಣದ ಮೇಡಕ್ ಜಿಲ್ಲೆಯ ನಾರಾಯಣಖೇಡ್ ವಿಧಾನಸಭಾ ಕ್ಷೇತ್ರದಲ್ಲಿ ಟಿಆರ್ಎಸ್ ಅಭ್ಯರ್ಥಿ ಭೂಪಾಲ ರೆಡ್ಡಿ ಕಾಂಗ್ರೆಸ್ನ ಸಂಜೀವ ರೆಡ್ಡಿ ವಿರುದ್ಧ ಮುನ್ನಡೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶದ ಮೈಹಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ತ್ರಿಪಾಠಿ 3500 ವೋಟ್ಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಪಂಜಾಬ್, ಬಿಹಾರ ಮತ್ತು ತ್ರಿಪುರ ರಾಜ್ಯಗಳಲ್ಲೂ ಮತ ಎಣಿಕೆ ಆರಂಭಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.