ನವದೆಹಲಿ: ದೇಶದ ಬಗ್ಗೆ ಅತೀವ ಕಾಳಜಿ, ಬದ್ಧತೆ ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ಬಾಲಿವುಡ್ ನಟ ಅನುಪಮ್ ಖೇರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಎಕನಾಮಿಕ್ ಟೈಮ್ಸ್ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅನುಪಮ್ ಖೇರ್, ಒಂದೇ ಒಂದು ದಿನವೂ ರಜೆ ತೆಗೆದುಕೊಳ್ಳದ ಪ್ರಧಾನಿಯನ್ನು ನಾವೀಗ ಹೊಂದಿದ್ದೇವೆ. ಪ್ರಧಾನಿ ರಜೆಯಲ್ಲಿದ್ದಾರೆ ಎಂಬ ಸುದ್ದಿಯನ್ನು ನಾನು ಓದೇ ಇಲ್ಲ ಎಂದಿದ್ದಾರೆ.
’ಅವರು ಯೋಧರೊಂದಿಗೆ ದೀಪಾವಳಿ ಆಚರಿಸುತ್ತಾರೆ, ದೇಶದ ಚಿತ್ರಣವನ್ನು ಬದಲಾಯಿಸಲು ಅವರು ತಮ್ಮಿಂದಾದ ಪ್ರಯತ್ನವನ್ನು ಮಾಡುತ್ತಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ಭ್ರಷ್ಟಾಚಾರ ಪ್ರಕರಣಗಳು ನಡೆದಿಲ್ಲ’ ಎಂದಿದ್ದಾರೆ.
ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಅವರು, ನಮ್ಮನ್ನು ಒಂದು ಪಕ್ಷ ಹಲವಾರು ವರ್ಷಗಳ ಕಾಲ ಆಳಿದೆ. 60 ವರ್ಷ ವಿವಿಧ ಪಕ್ಷಗಳಿಂದ ತುಳಿತಕ್ಕೊಳಗಾದ ಜನರು ಈಗ ದೇಶವನ್ನು ಆಳುತ್ತಿದ್ದಾರೆ ಎಂದಿದ್ದಾರೆ.
’10 ವರ್ಷಗಳ ಕಾಲ ಯಾವುದಕ್ಕೂ ಉತ್ತರಿಸದ ಪ್ರಧಾನಿಯನ್ನು ನಾವು ಹೊಂದಿದ್ದೆವು, ಆದರೆ ಇದೀಗ ದೇಶದಲ್ಲಿ ಏನೇ ನಡೆದರೂ ಮೋದಿಯನ್ನೇ ಜವಾಬ್ದಾರರನ್ನಾಗಿಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.