News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಗೆ ಚಾಲನೆ

siddaramaiah-

ಬೆಂಗಳೂರು : ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ವಿಧಾನ ಸೌಧದ ಬೆಂಕ್ವೇಟ್ ಹಾಲ್ ನಲ್ಲಿ ಚಾಲನೆ ನೀಡಲಾಗಿದೆ.

ಈ ಯೋಜನೆಯಂತೆ ಅಫಘಾತಕ್ಕೊಳಗಾದ ವ್ಯಕ್ತಿಗೆ 48 ಗಂಟೆ ಅವಧಿಗೆ ಗರಿಷ್ಠ ರೂ. 25 ಸಾವಿರ ವರೆಗಿನ ಚಿಕಿತ್ಸೆಯನ್ನು ನೀಡಲು  ಮಾನವೀಯ ನೆಲೆಯಲ್ಲಿ ಒದಗಿಸಿ ಜನರ ಜೀವವನ್ನು ಉಳಿಸಲು  ಈ ಯೋಜನೆ ಜಾರಿಗೆ ತರಲಾಗಿದೆ.

ರಾಷ್ಟ್ರದಲ್ಲೇ ಮೊತ್ತಮೊದಲಬಾರಿಗೆ ಈ ಯೋಜನೆಯನನ್ಉ ಜಾರಿಗೆ ತರಲಾಗಿದೆ. ನೊಂದಾಯಿತ ಖಾಸಗಿಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಯೋಜನೆಯ ಲಾಭಪಡೆಬಹುದು. ಅಲ್ಲದೇ ಇದಕ್ಕೆ 104 ಮತ್ತು 108 ಎಂಬ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹರೀಶ್ ಬೆಂಗಳೂರಿನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪುವ ಸಂದರ್ಭದಲ್ಲೂ ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದ. ಆದುದರಿಂದ ಈ ಯೋಜನೆಗೆ ಹರೀಶ್ ಹೆಸರಿಡಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top