ಬೆಂಗಳೂರು: ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧದ ಸಮರವನ್ನು ಬ್ಯಾಂಕುಗಳು ತೀವ್ರಗೊಳಿಸಿದ್ದು, ಅವರು ದೇಶ ಬಿಡದಂತೆ ತಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ.
ಮಲ್ಯ ಅವರನ್ನು ಈ ದೇಶ ಬಿಟ್ಟು ಹೊರ ಹೋಗದಂತೆ ತಡೆಯಬೇಕು, ಅವರ ಪಾಸ್ಪೋರ್ಟ್ ಜಪ್ತಿ ಮಾಡಬೇಕು ಎಂದು ಕೋರಿ ಮಂಗಳವಾರ ಎಸ್ಬಿಐ ನೇತೃತ್ವದ ಸಾಲ ವಸೂಲಾತಿ ಪ್ರಾಧಿಕಾರ ನ್ಯಾಯಾಲಯದ ಮೆಟ್ಟಿಲು ಏರಿವೆ.
ಈ ಅರ್ಜಿಯ ವಿಚಾರಣೆಯನ್ನು ನ್ಯಾ.ಟಿಎಸ್ ಠಾಕೂರ್, ನ್ಯಾ.ಯು.ಯು.ಲಲಿತ್ ಅವರಿದ್ದ ನ್ಯಾಯಪೀಠ ಬುಧವಾರಕ್ಕೆ ಮುಂದೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.