ಅಲಹಾಬಾದ್: ನ್ಯಾಯಾಂಗ ಪ್ರಸ್ತುತ ವಿಶ್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದ್ದು, ಇದು ಆಂತರಿಕ ಸವಾಲಾಗಿದೆ ಎಂದು ಭಾರತ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ 150ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭವನ್ನು ನೆರೆವೇರಿಸಿ ಅವರು ಮಾತನಾಡಿದರು.
’ನಾನು ಆಂತರಿಕ ಸವಾಲಿನ ಬಗ್ಗೆ ಮಾತನಾಡುವಾಗಲೆಲ್ಲಾ ನಮ್ಮ ದೇಶ ಇಂದು ಎದುರಿಸುತ್ತಿರುವ ವಿಶ್ವಸಾರ್ಹತೆಯ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ನ್ಯಾಯಾಧೀಶರು ತಮ್ಮ ಕರ್ತವ್ಯಗಳ ಬಗ್ಗೆ, ಸಮಯಪಾಲನೆಯ ಬಗ್ಗೆ ಆತ್ಮಸಾಕ್ಷಿಯಂತೆ ನಡೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.
’ನ್ಯಾಯಾಂಗ ಒಂದು ಸಂಸ್ಥೆಯಾಗಿದ್ದು, ಸಾರ್ವಜನಿಕರ ಗಮನ ಸದಾ ಇದರ ಮೇಲಿರುತ್ತದೆ. ಭವಿಷ್ಯದಲ್ಲಿ ನಮ್ಮ ಮುಂದೆ ಹಲವಾರು ಸವಾಲುಗಳಿದ್ದು, ಆ ಸವಾಲುಗಳನ್ನು ಎದುರಿಸಲು ನಾವು ಸನ್ನದ್ಧರಾಗಬೇಕಿದೆ. ಹೊರಗಿನಿಂದ ಬರುವ ಸವಾಲು ಅಷು ಕಠಿಣವಾಗಿರುವುದಿಲ್ಲ, ಅದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಬಹುದು, ಆದರೆ ಆಂತರಿಕ ಸವಾಲುಗಳ ಬಗ್ಗೆ ನಾವು ಎಚ್ಚರಿಕೆಯಿಂದ ಇರಬೇಕು’ ಎಂದಿದ್ದಾರೆ.
ಪೆಂಡಿಂಗ್ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಬಾರ್ ಕೌನ್ಸಿಲ್ಗಳು ಸಹಕಾರ ನೀಡಬೇಕು ಎಂದರು. ನ್ಯಾಯಾಧೀಶರು ಉತ್ತಮ ಕಾರ್ಯವನ್ನೇ ಮಾಡುತ್ತಿದ್ದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.