ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಒಂದು ದಿನದ ವಿಶೇಷ ಕಾರ್ಯಾಗಾರವು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಮಾ.18 ರಂದು ಆಯೋಜಿಸಲಾಗಿದೆ.
ಕಾರ್ಯಾಗಾರದ ಉದ್ಘಾಟನೆಯನ್ನು ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಅಧ್ಯಕ್ಷರು, ಎಸ್.ಸಿ.ಡಿ.ಸಿ.ಸಿ. ನಿ., ಮಂಗಳೂರು ಇವರು ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಶೇಖರಗೌಡ ವಿರೂಪಾಕ್ಷಗೌಡ ಮಾಲಿ ಪಾಟೀಲ, ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ವಹಿಸಲಿದ್ದಾರೆ.
ಪ್ರಾಸ್ತಾವಿಕ ಭಾಷಣವನ್ನು ಶ್ರೀ ಹರೀಶ್ ಆಚಾರ್ಯ, ಅಧ್ಯಕ್ಷರು, ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಇವರು ನಡೆಸಲಿದ್ದು, ಗೌರವ ಅಭ್ಯಾಗತರಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್. ಎಲ್. ಭೋಜೇಗೌಡ, ಶ್ರೀ ಎ. ಕೆ. ಮನುಮುತ್ತಪ್ಪ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ. ಎ. ವೆಂಕಟೇಶ್, ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀ ಬಿ. ಕೆ. ಸಲೀಂರವರು ಭಾಗವಹಿಸಲಿದ್ದಾರೆ.
ಅತಿಥಿ ಉಪನ್ಯಾಸಕರಾಗಿ ಡಾ. ಎಸ್. ಎ. ಸಿದ್ಧಾಂತಿ, ನಿವೃತ್ತ ಪ್ರಾದೇಶಿಕ ನಿರ್ದೇಶಕರು, ಆರ್. ಐ. ಸಿ. ಎಂ., ಬೆಂಗಳೂರು ಇವರು ಮಾಹಿತಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯಿಂದ ಸಹಕಾರ ರಂಗದ ಬಲವರ್ಧನೆ ಶ್ರೀ ಹೆಚ್.ಎಸ್. ನಾಗರಾಜಯ್ಯ, ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರು, ಬೆಂಗಳೂರು ಇವರು ಸಹಕಾರಿ ಕಾಯ್ದೆ ಮತ್ತು ಆಡಳಿತ ನಿರ್ವಹಣೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಶ್ರೀ ಚಂದ್ರಕಾಂತ್ ರಾವ್ ರವರು ಆದಾಯ ತೆರಿಗೆ, ಸೇವಾ ತೆರಿಗೆ ಮತ್ತು ಟಿ. ಡಿ. ಎಸ್. ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಈ ಕಾರ್ಯಾಗಾರದ ಸಂಪೂರ್ಣ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ಫ್ಯಾಕ್ಸ್ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.