ಲಕ್ನೌ: ತಮ್ಮ ಕಚೇರಿಯಲ್ಲಿ ನಾಲ್ಕು ವರ್ಷಗಳ ಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ’ಸಮಾಜವಾದಿ ಸುಗಂಧ್’ ಎಂಬ 4 ವಿವಿಧ ಬಗೆಯ ಸುಗಂಧಗಳನ್ನು (perfume) ಬಿಡುಗಗಡೆ ಮಾಡಿದ್ದಾರೆ.
ತನ್ನ ಸರ್ಕಾರ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿದ್ದು, ವಿರೋಧ ಪಕ್ಷಗಳು ತಮ್ಮ ವಿರುದ್ಧ ಯಾವುದೇ ಅಜೆಂಡಾ ರೂಪಿಸದಂತೆ ಮಾಡಿದೆ. ಈ ಪಕ್ಷಗಳು ತಮ್ಮ ಸಂಪರ್ಕ ಕಳೆದುಕೊಂಡಿದೆ ಅಥವಾ ಆಫ್ಲೈನ್ ಆಗಿವೆ ಎಂದು ಈ ವೇಳೆ ಅವರು ಹೇಳಿದ್ದಾರೆ.
ತಮ್ಮ ಸರ್ಕಾರ ಪ್ರಜಾಪ್ರಭುತ್ವ ಮತ್ತು ಉದಾರವಾದಿಯಾಗಿದ್ದು, ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಲು ಸಂಪೂರ್ಣ ಸ್ವಾತಂತ್ರ್ಯವಿದೆ. ತನ್ನ ಸರ್ಕಾರದ ಕಾರ್ಯಗಳನ್ನು ಇತರ ಸರ್ಕಾರಗಳ ಜೊತೆ ಹೋಲಿಸಿ ಜನರು ತಮ್ಮ ಅಭಿಪ್ರಾಯಗಳನ್ನು ಹೇಳುವುದನ್ನು ಬಯಸುತ್ತೇನೆ ಎಂದು ಈ ವೇಳೆ ಅವರು ಹೇಳಿದ್ದಾರೆ.
ರಾಜ್ಯಾದ್ಯಂತ 3,712 ಕೋಟಿ ರೂ. ಮೌಲ್ಯದ ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಬಿಸುಗಡೆ ಮಾಡಿದ ಅವರು, ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ತನ್ನ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಿದೆ. ಹಲವು ಸಂದರ್ಭಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳಿಗಿಂತ ’ಗೌರವ’ ಮತ್ತು ’ಮರ್ಯಾದೆ’ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.