ನವದೆಹಲಿ: ಜನರಿಗೆ ಸೈದ್ಧಾಂತಿಕ ವಿಚಾರಗಳ ಬಗ್ಗೆ ಅಪಪ್ರಚಾರ ಮಾಡುವ ಬದಲು ಆರೋಗ್ಯ ಸುಧಾರಣೆ ಮತ್ತಿತರ ವಿಷಯಗಳ ಬಗ್ಗೆ ಜನರಿಗೆ ತಿಳುವಳಕೆ ಮತ್ತು ಮಾಹಿತಿಗಳನ್ನು ನೀಡಿ ಪ್ರಜ್ಞಾವಂತರಾಗಿಸಿ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
6ನೇ ರಾಷ್ಟ್ರೀಯ ಸಮುದಾಯ ರೇಡಿಯೋ ಸಮ್ಮೇಳನ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆರೋಗ್ಯ ಸುಧಾರಣೆ ಮತ್ತು ಆರೋಗ್ಯ ತಡೆಗಟ್ಟುವಂತಹ ಶಿಬಿರಗಳ ಕಾರ್ಯಕ್ರಮಗಳಿಗೆ ರೇಡಿಯೋ ಒಂದು ಪರಿಣಾಮಕಾರಿ ಸಾಧನವಾಗಲಿದೆ ಎಂದು ಜೇಟ್ಲಿ ಹೇಳಿದ್ದಾರೆ.
ಭಾರತದಲ್ಲಿನ ವಿವಿಧತೆ, ಹವಾಮಾನ, ವಿವಿಧ ಜಿಲ್ಲೆಗಳ ಹಲವಾರು ಮಾದರಿಯ ಬೆಳೆಗಳ ಬಗ್ಗೆ ತಿಳುವಳಿಕೆ ಮತ್ತು ಮಾಹಿತಿಗಳನ್ನು ನೀಡುವುದರಿಂದ ಸಮುದಾಯ ರೇಡಿಯೋ ಕೇಂದ್ರಗಳ ಪ್ರಾಮುಖ್ಯತೆ ಹೆಚ್ಚಲಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ದಿನಪತ್ರಿಕೆಗಳು ಕುಗ್ಗುತ್ತಿದ್ದು, ಪ್ರದೇಶಿಕ ಭಾಷೆಗಳ ದಿನಪತ್ರಿಕೆಗಳು ಏರುತ್ತಿವೆ. ಕಮ್ಯೂನಿಟಿ ರೇಡಿಯೋಗಳು ಕೂಡ ಇದೇ ಮಾದರಿಯಲ್ಲಿ ಬೆಳೆಯಲಿವೆ. ದೇಶದಲ್ಲಿ ಒಟ್ಟು 400 ಕಮ್ಯೂನಿಟಿ ರೇಡಿಯೋ ಕೇಂದ್ರಗಳಿಗೆ ಅನುಮತಿ ನೀಡಲಾಗಿದ್ದು, ಸದ್ಯ 191 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಜೇಟ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.