ಮಂಗಳೂರು : ರಾಜ್ಯ ಸರಕಾರದ ಎಸ್.ಎಫ್.ಸಿ. ಅನುದಾನದಿಂದ ಪಾಲಿಕೆ ವ್ಯಾಪ್ತಿಯ ಮನೆಗಳಿಗೆ ಪ್ಲಾಸ್ಟಿಕ್ ಕಸದ ಬುಟ್ಟಿಗಳನ್ನು ವಿತರಿಸುವ ಪಾಲಿಕೆಯ ಯೋಜನೆ ಸಾರ್ವಜನಿಕ ಹಣವನ್ನು ಪೋಲು ಮಾಡುವ ಯೋಜನೆಯಾಗಿದೆ.
ಮೇಯರ್ ಪದವಿ ಸ್ವೀಕರಿಸುತ್ತಲೇ ಪ್ಲಾಸ್ಟಿಕ್ ನಿಷೇದದ ಮಂತ್ರ ಪಠಿಸಿದ ಮೇಯರ್ರವರು ತಮ್ಮ ಪ್ರಥಮ ಕೊಡುಗೆಯಾಗಿ ಜನತೆಗೆ ಪ್ಲಾಸ್ಟಿಕ್ ಬುಟ್ಟಿಗಳನ್ನು ವಿತರಿಸಲು ಯೋಜನೆ ಹಾಕಿರುವುದು ಅವರ ಹೇಳಿಕೆಗೆ ವ್ಯತಿರಿಕ್ತವಾಗಿದೆ. 1.90 ಕೋಟಿ ರೂಪಾಯಿಗಳ ಎಸ್.ಎಫ್.ಸಿ ಅನುದಾನವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ವಿನಿಯೋಗಿಸುವುದನ್ನು ಬಿಟ್ಟು ಸಾರ್ವಜನಿಕರಿಗೆ ಕಸದ ಬುಟ್ಟಿ ನೀಡುವ ವ್ಯರ್ಥ ಯೋಜನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಈ ಹಿಂದೆ ನಗರದ ಕೆಲವು ವಾರ್ಡುಗಳಲ್ಲಿ ಇಂತಹ ಕಸದ ಬುಟ್ಟಿಗಳನ್ನು ವಿತರಿಸಿದ ಬಗ್ಗೆ ಅವುಗಳ ಬಳಕೆ ಮತ್ತು ಈಗ ಅವುಗಳ ಅಸ್ಥಿತ್ವದ ಬಗ್ಗೆ ಸಂಪೂರ್ಣ ವರದಿಯನ್ನು ತರಿಸಿ ಪಾಲಿಕೆ ಸಭೆಯಲ್ಲಿ ಅದನ್ನು ಮಂಡಿಸಬೇಕಾಗಿ ರೂಪಾಡಿ ಬಂಗೇರಾ ಅವರು ಆಗ್ರಹಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಹೆಚ್ಚಿನ ಎಲ್ಲಾ ಮನೆಗಳಲ್ಲಿ ಕಸದ ಬುಟ್ಟಿ ಇರುವುದು ಸಾಮಾನ್ಯವಾಗಿರುವಾಗ ಪುನಃ ಪ್ಲಾಸ್ಟಿಕ್ ಕಸದ ಬುಟ್ಟಿಯನ್ನು ಪಾಲಿಕೆ ವತಿಯಿಂದ ನೀಡಲು ಯೋಜನೆ ರೂಪಿಸುವುದರ ಹಿಂದೆ ಆಡಳಿತದವರ ಸ್ವಹಿತಾಸಕ್ತಿ ಅಡಗಿದ್ದು, ಈ ಯೋಜನೆಯನ್ನು ಕೂಡಲೇ ನಿಲ್ಲಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.