ಮಂಗಳೂರು : ಪ್ರಸಕ್ತ ಸೆಮಿಸ್ಟರ್ ಅನ್ವಯವಾಗುವಂತೆ ಮಂಗಳೂರು ವಿಶ್ವವಿದ್ಯಾಲಯವು ತನ್ನ ಎಲ್ಲಾ ತನ್ನ ಪದವಿ ವಿದ್ಯಾರ್ಥಿಗಳಿಗೆ ತಮ್ಮ 1ನೇ ಹಾಗೂ 3 ನೇ ಸೆಮಿಸ್ಟರ್ನಲ್ಲಿ ಅನುತ್ತೀರ್ಣರಾಗಿ ಬಾಕಿ ಉಳಿಸಿಕೊಂಡಿರುವ ವಿಷಯಗಳಗೆ ಪರೀಕ್ಷೆ ನೀಡುವುದನ್ನು ನಿರಾಕರಿಸಿ ಆದೇಶ ಹೊರಡಿಸಿದೆ.
ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೆ ವಿ.ವಿ. ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳು ಈ ಎಲ್ಲಾ ವಿಷಯಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ ನಂತರ ಈ ಆದೇಶ ಹೊರಡಿಸಿರುವುದು ಅತ್ಯಂತ ಮೂರ್ಖತನವಾಗಿದೆ. ಅಂತೆಯೇ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ 1 ನೇ ಹಾಗೂ 3 ನೇ ಸೆಮಿಸ್ಟರ್ ವಿಷಯಗಳ ಮರುಪರೀಕ್ಷೆ ನೀಡಲು ನಿರಾಕರಿಸಿರುವುದು ಅವರು ಆ ಪರೀಕ್ಷೆ ಬರೆಯಲು ತಮ್ಮ ಪದವಿ ಕೋರ್ಸು ಮುಗಿದ ಮೇಲೆ ಆರು ತಿಂಗಳುಗಳ ಕಾಲ ಕಾಯಬೇಕಾಗುತ್ತದೆ.
ಇದರಿಂದ ಆ ವಿದ್ಯಾರ್ಥಿಗಳ ಅಮೂಲ್ಯವಾದ ಒಂದು ವರ್ಷ ವ್ಯರ್ಥವಾಗುವುದಲ್ಲದೆ, ಉನ್ನತ ಶಿಕ್ಷಣ ಹಾಗೂ ಉದ್ಯೋಗಗಳಿಂದ ವಂಚಿತರಾಗಿ ಅವರ ಭವಿಷ್ಯವೇ ಕತ್ತಲಿಗೆ ಸರಿಯುವ ಸಂಭವವಿದೆ. ಆದ್ದರಿಂದ ಪ್ರಸಕ್ತ ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ ಎಲ್ಲಾ ಸೆಮಿಸ್ಟರ್ಗಳ ಎಲ್ಲಾ ವಿಷಯಗಳ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕಾಗಿ ಅ.ಭಾ.ವಿ.ಪ ಈ ಮೂಲಕ ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.