ನವದೆಹಲಿ: ಅಭಿವೃದ್ಧಿ ವಿಷಯದತ್ತ ಹೆಚ್ಚಿನ ಗಮನ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ ಬೆನ್ನಲ್ಲೇ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಸರ್ಕಾರದ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬುದನ್ನು ಪರಿಶೀಲನೆ ನಡೆಸಲು ತಂಡವೊಂದನ್ನು ರಚಿಸಲು ಮುಂದಾಗಿದ್ದಾರೆ.
ಈ ತಂಡ ರಾಜ್ಯಗಳನ್ನು ಸುತ್ತಿ ಕೇಂದ್ರ ಅಭಿವೃದ್ಧಿ ಕಾರ್ಯಗಳು ಸಕಾರಗೊಂಡಿದೆಯೇ ಎಂಬುದನ್ನು ಪರಿಶೀಲಿಸಲಿದೆ. ಈ ತಂಡದಲ್ಲಿ ಪ್ರಧಾನ ಕಾರ್ಯದರ್ಶಿಗಳು, ನಾಯಕರು, ಸದಸ್ಯರುಗಳು ಇರಲಿದ್ದಾರೆ.
ಈ ತಂಡ ರಾಜ್ಯಗಳಿಗೆ ಭೇಟಿ ಕೊಟ್ಟು ಅಲ್ಲಿ ಕನಿಷ್ಠ ಎಂದರೆ 3 ದಿನ, 3 ರಾತ್ರಿಗಳನ್ನು ಕಳೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ನಿರ್ಧಾರವನ್ನು ಮಾ 19-20ರಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.