ಮಂಗಳೂರು : ಭಾರತೀಯ ಜನತಾ ಪಾರ್ಟಿಯ 36ನೇ ವರ್ಷದ ಸ್ಥಾಪನಾ ದಿನಾಚರಣೆಯನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ರವಿಶಂಕರ್ ಮಿಜಾರ್ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಇವರು ತಮ್ಮ ಭಾಷಣದಲ್ಲಿ ಭಾರತೀಯ ಜನ ಸಂಘದ ಹುಟ್ಟಿನಿಂದ ಹಿಡಿದು ಭಾರತೀಯ ಜನತಾ ಪಾರ್ಟಿಯ ಉದಯ ಹಾಗೂ ಕೇಂದ್ರ ಸರಕಾರದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿಯವರ ಅದ್ಭುತ ಜನಪರ ಕಾರ್ಯಕ್ರಮಗಳನ್ನು ವಿವರಿಸಿದರು.
ವೇದಿಕೆಯಲ್ಲಿ ರಾಜ್ಯ ಪರಿಷತ್ನ ಸದಸ್ಯರಾದ ರಾಜಗೋಪಾಲ ರೈ, ಜಿಲ್ಲಾ ಖಜಾಂಚಿ ಸಂಜಯ ಪ್ರಭು, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮನಪಾ ಸದಸ್ಯರಾದ ರಾಜೇಂದ್ರ ಕುಮಾರ್, ಜಯಂತಿ ಆಚಾರ್, ಪೂರ್ಣಿಮಾ, ಮಂಡಲ ಪದಾಧಿಕಾರಿಗಳಾದ ಶ್ರೀನಿವಾಸ್ ಶೇಟ್, ವಾರ್ಡ್ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಮಂಡಲ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಬೋಳೂರು ಕಾರ್ಯಕ್ರಮ ನಿರ್ವಹಣೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.