ಮಂಗಳೂರು: ನೀರಿನ ಕೊರತೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನಿಧಿಯು ಈವರೆಗೆ ಬಡವರಿಗೆ ತಲುಪಿಲ್ಲ. ರಾಜ್ಯ ಸರ್ಕಾರದಿಂದ ಇದನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸರ್ಕಾರ ಮತ್ತು ಶಾಸಕರಿಗೆ ಅಧಿಕಾರಿಗಳು ಸೂಕ್ತ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ಅವರಿಗೆ ಸರ್ಕಾರದ ಭಯವಿಲ್ಲ. ಸರ್ಕಾರ ಕೂಡ ಬರದ ಸಮಸ್ಯೆಯನ್ನು ಪರಿಹರಿಸುತ್ತಿಲ್ಲ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಏರಿಸಲಾಗಿದ್ದು, ಮುಂದಿನ 25 ವರ್ಷಗಳಿಗೆ 9.35 ರೂ. ವೆಚ್ಚದಲ್ಲಿ ಸೌರ ವಿದ್ಯುತ್ ಖರೀದಿಸಿದೆ. ಇದು ಜನರಿಗೆ ಒಂದು ಹೊರೆಯಾಗಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೃಷಿ ಕ್ಷೇತ್ರ ಹಲವಾರು ಸಮಸ್ಯೆಗಳು ಎದುರಿಸುತ್ತಿದೆ. ಈಗ ಭ್ರಷ್ಟಾಚಾರ ವಿರೋಧಿ ಬ್ಯೂರೋ ರೂಪಿಸುವ ಮೂಲಕ ಲೋಕಾಯುಕ್ತವನ್ನು ಮುಚ್ಚುತ್ತಿದೆ. ಇದರೊಂದಿಗೆ ಭ್ರಷ್ಟ ಅಧಿಕಾರಿಗಳನ್ನು ಉಳಿಸಲು ಪ್ರಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.