ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿದೆ. ಇದಕ್ಕಾಗಿ ಈಗಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಅಲ್ಲಿನ 52 ಸಾವಿರ ಗ್ರಾಮ ಪಂಚಾಯತ್ಗಳನ್ನು ತನ್ನತ್ತ ಸೆಳೆಯಲು ತಂತ್ರಗಾರಿಕೆ ರೂಪಿಸಿಕೊಂಡಿದೆ.
ಅಲ್ಲಿನ ಗ್ರಾಮೀಣ ಪ್ರದೇಶಗಳನ್ನು ತಲುಪಿ, ದಲಿತ ಮತ್ತು ಹಿಂದುಳಿದ ವರ್ಗಗಳ ಮತವನ್ನು ಪಡೆಯಲು ಈಗಿನಿಂದಲೇ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹಿಂದುಳಿದ ವರ್ಗದ ಕೇಶವ್ ಮೌರ್ಯ ಅವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದೆ.
ಇದಕ್ಕಾಗಿ ಎಪ್ರಿಲ್೧೪ರ ಅಂಬೇಡ್ಕರ್ ಜಯಂತಿಯಂದು ’ಗ್ರಾಮ ಸ್ವರಾಜ್ ಅಭಿಯಾನ್’ನನ್ನು ಅದು ಆರಂಭಿಸುತ್ತಿದೆ. ಎಪ್ರಿಲ್ 24ರವರೆಗೆ ಇದು ಮುಂದುವರೆಯಲಿದೆ. ಈ ಅಭಿಯಾನದ ಅಂಗವಾಗಿ 52 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ನೇರ ಪ್ರಸಾರ ಮಾಡಲಾಗುತ್ತಿದೆ.
ಜಿಲ್ಲಾ ಮಟ್ಟದ ಸಭೆಗಳನ್ನು, ಧ್ವಜಾರೋಹಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಗ್ರಾಮೀಣ ಉತ್ತರಪ್ರದೇಶವನ್ನು ತನ್ನತ್ತ ಸೆಳೆಯಲು ಬೇಕಾದ ಸಿದ್ಧತೆಯನ್ನು ಬಿಜೆಪಿ ಈಗಿನಿಂದಲೇ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.