ಮುಂಬಯಿ: ತೀವ್ರ ಬರಗಾಲದಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಎಪ್ರಿಲ್ 30ರ ಬಳಿಕ ನಿಗದಿಯಾಗಿರುವ ಎಲ್ಲಾ ಐಪಿಎಲ್ ಪಂದ್ಯಗಳನ್ನು ಬೇರೆಡೆಗೆ ಶಿಫ್ಟ್ ಮಾಡಬೇಕು ಎಂದು ಬಾಂಬೆ ಹೈಕೋರ್ಟ್ ಆದೇಶಿಸಿದೆ.
ಮಹಾರಾಷ್ಟ್ರದಲ್ಲಿ ಕುಡಿಯೋ ನೀರಿಗೆ ತಾತ್ವರವಿದೆ, ಹೀಗಿರುವಾಗ ಐಪಿಎಲ್ ಪಂದ್ಯಗಳಿಗೆ ಲಕ್ಷಗಟ್ಟಲೆ ಲೀಟರ್ ನೀರುಗಳನ್ನು ವ್ಯಯಿಸಲಾಗುತ್ತದೆ. ಇದರಿಂದ ಜನರ ನೀರಿನ ಅಭಾವ ಇನ್ನೂ ಹೆಚ್ಚಾಗುತ್ತದೆ ಎಂದು ದೂರಿ ಹೋರಾಟಗಾರರು, ಎನ್ಜಿಓಗಳು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದವು.
ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಎ.30ರ ಬಳಿಕ ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಎಲ್ಲಾ ಐಪಿಎಲ್ ಪಂದ್ಯಗಳನ್ನು ಬೇರಡೆಗೆ ಶಿಫ್ಟ್ ಮಾಡಬೇಕು ಎಂದು ಆದೇಶ ನೀಡಿದೆ.
ಐಪಿಎಲ್ ಪಂದ್ಯ ಶಿಫ್ಟ್ ಮಾಡುವುದರಿಂದ ನೀರಿನ ಸಮಸ್ಯೆ ಬರೆ ಹರಿಯುವುದಿಲ್ಲ, ಬದಲಾಗಿ ಬರ ಪೀಡಿತ ಪ್ರದೇಶಕ್ಕೆ ನೀರುಗಳನ್ನು ಸರಬರಾಜು ಮಾಡುವ ಅಗತ್ಯವಿದೆ ಎಂದು ಹೈಕೋರ್ಟ್ ತಿಳಿಸಿದೆ.
ಹೈಕೋರ್ಟ್ ತೀರ್ಪು ಬಿಸಿಸಿಐಗೆ ದೊಡ್ಡ ಹಿನ್ನಡೆಯುಂಟು ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು 13 ಪಂದ್ಯ ನಿಗದಿಯಾಗಿದ್ದು ಅವೆಲ್ಲವನ್ನೂ ಸ್ಥಳಾಂತರ ಮಾಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.